ಭಯ ಚಿಂತೆ – ಧೈರ್ಯ ಪ್ರೀತಿ
ಯೆರೆಮಿಯ 23
3 ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
4 ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ; ಅವರು ಇನ್ನು ಮೇಲೆ ಭಯಪಡುವದೇ ಇಲ್ಲ, ಅಂಜುವದಿಲ್ಲ, ಕೊರತೆಪಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.
ಯೋಹಾನನು 14
27 ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
ಯೋಹಾನನು 14
23 ಯೇಸು ಪ್ರತ್ಯುತ್ತರವಾಗಿ ಅವನಿಗೆ–ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
24 ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.
25 ನಾನು ಇನ್ನೂ ನಿಮ್ಮ ಬಳಿಯಲ್ಲಿ ಇರುವಾಗಲೇ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ;
26 ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
27 ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
28 ನಾನು ಹೋಗಿ ತಿರಿಗಿ ನಿಮ್ಮ ಬಳಿಗೆ ಬರುವದು ಹೇಗೆ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ; ನೀವು ನನ್ನನ್ನು ಪ್ರೀತಿಸಿದ್ದರೆ ನಾನು ನನ್ನ ತಂದೆಯ ಬಳಿಗೆ ಹೊಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದಿರಿ; ನನ್ನ ತಂದೆಯು ನನಗಿಂತಲೂ ದೊಡ್ಡವನಾಗಿದ್ದಾನೆ.
29 ಅದು ನಡೆಯುವಾಗ ನೀವು ನಂಬುವಂತೆ ನಡೆಯು ವದಕ್ಕಿಂತ ಮುಂಚೆಯೇ ಈಗ ನಾನು ನಿಮಗೆ ಹೇಳಿದ್ದೇನೆ.
30 ಇನ್ನು ಮೇಲೆ ನಾನು ನಿಮ್ಮೊಂದಿಗೆ ಬಹಳವಾಗಿ ಮಾತನಾಡುವದಿಲ್ಲ; ಯಾಕಂದರೆ ಇಹ ಲೋಕದ ಅಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ನನ್ನಲ್ಲಿ ಏನೂ ಇಲ್ಲ.
31 ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.
ಭಯವು ಆದಾಮನಿಂದ ಪ್ರಾರಂಭವಾಗುತ್ತದೆ:
ಆದಿಕಾಂಡ 3
4 ಸರ್ಪವು ಸ್ತ್ರೀಗೆ–ನೀವು ಖಂಡಿತವಾಗಿ ಸಾಯುವದಿಲ್ಲ;
5 ನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು.
6 ಸ್ತ್ರೀಯು–ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
7 ಆಗ ಅವರಿಬ್ಬರ ಕಣ್ಣುಗಳು ತೆರೆಯಲ್ಪಟ್ಟು ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಕೊಂಡರು; ಅವರು ಅಂಜೂರದ ಎಲೆಗಳನ್ನು ಹೊಲಿದುಕೊಂಡು ತಮಗೆ ತಾವೇ ಉಡುಗೆಗಳನ್ನು ಮಾಡಿಕೊಂಡರು.
8 ಆಗ ಕರ್ತನಾದ ದೇವರು ದಿನದ ತಂಗಾಳಿಯಲ್ಲಿ ತೋಟದೊಳಗೆ ತಿರುಗಾಡುವ ಶಬ್ದವನ್ನು ಆದಾಮನೂ ಅವನ ಹೆಂಡತಿಯೂ ಕೇಳಿ ದೇವರಾದ ಕರ್ತನ ಸನ್ನಿಧಿಯಿಂದ ತೋಟದ ಮರಗಳಲ್ಲಿ ಅಡಗಿಕೊಂಡರು.
9 ಆಗ ಕರ್ತನಾದ ದೇವರು ಆದಾಮನನ್ನು ಕರೆದು ಅವನಿಗೆ–ನೀನು ಎಲ್ಲಿದ್ದೀ ಅಂದನು.
10 ಅದಕ್ಕ ವನು–ನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು.
ಪವಿತ್ರ ಭಯ:
ಇಬ್ರಿಯರಿಗೆ 11
7 ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
ಭಯದ ಆತ್ಮ – ಭಯವು ಒಂದು ಆತ್ಮ:
2 ತಿಮೊಥೆಯನಿಗೆ 1
6 ಆದಕಾರಣ ನಾನು ನಿನಗೆ ಹಸ್ತಾರ್ಪಣ ಮಾಡು ವದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.
7 ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಸ್ವಸ್ಥಬುದ್ಧಿಯ ಆತ್ಮವೇ ಹೊರತು ಭಯದ ಆತ್ಮವಲ್ಲ.
ರೋಮಾಪುರದವರಿಗೆ 8
14 ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ.
15 ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
16 ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
17 ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
ಭಯದ ಆತ್ಮದಿಂದ ಬಿಡುಗಡೆ
ಕೀರ್ತನೆಗಳು 34
3 ನನ್ನ ಸಂಗಡ ಕರ್ತ ನನ್ನು ಘನಪಡಿಸಿರಿ. ನಾವು ಒಟ್ಟಾಗಿ ಆತನ ಹೆಸ ರನ್ನು ಘನಪಡಿಸೋಣ.
4 ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು.
5 ಅವರು ಆತನನ್ನು ದೃಷ್ಟಿಸಿ ಪ್ರಕಾಶ ಹೊಂದಿದರು. ಅವರ ಮುಖಗಳು ನಾಚಿಕೆಪಡಲಿಲ್ಲ.
6 ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
7 ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ.
ಪ್ರೀತಿಯು ಭಯದ ವಿರುದ್ಧವಾಗಿದೆ
1 ಯೋಹಾನನು 4
11 ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.
12 ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.
13 ಆತನು ನಮಗೆ ತನ್ನ ಆತ್ಮದಲ್ಲಿ ಪಾಲನ್ನು ಅನುಗ್ರಹಿಸದ್ದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆಂತಲೂ ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂತಲೂ ತಿಳಿದುಕೊಳ್ಳು ತ್ತೇವೆ.
14 ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.
15 ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
16 ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
17 ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯ ವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಯಾಕಂದರೆ ಆತನು ಎಂಥವನಾಗಿದ್ದಾನೋ ನಾವು ಅಂಥವ ರಾಗಿಯೇ ಈ ಲೋಕದಲ್ಲಿದ್ದೇವೆ.
18 ಪ್ರೀತಿಯಲ್ಲಿ ಹೆದರಿಕೆಯಿಲ್ಲ; ಆದರೆ ಪೂರ್ಣ ಪ್ರೀತಿಯು ಹೆದರಿಕೆ ಯನ್ನು ಹೊರಡಿಸಿಬಿಡುತ್ತದೆ. ಯಾಕಂದರೆ ಭಯವಿರು ವಲ್ಲಿ ಯಾತನೆಯಿರುವದು. ಭಯಪಡುವವನು ಪ್ರೀತಿ ಯಲ್ಲಿ ಸಿದ್ಧಿಗೆ ಬಂದವನಲ್ಲ.
19 ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
20 ಒಬ್ಬನು–ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?
21 ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
ರೋಮಾಪುರದವರಿಗೆ 8
35 ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?
36 ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.
37 ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
38 ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿ
39 ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
ಭಯದ ಬಗ್ಗೆ ದಾವೀದನ ಪ್ರಕಟಣೆ
ಕೀರ್ತನೆಗಳು 27
1 ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
2 ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು.
3 ನನಗೆ ವಿರೋಧವಾಗಿ ದಂಡು ಇಳಿದರೂ ನನ್ನ ಹೃದಯವು ಭಯಪಡದು; ಯುದ್ಧವು ನನ್ನ ಮೇಲೆ ಎದ್ದರೂ ಇದರಲ್ಲಿಯೂ ನಾನು ಭರವಸವಾಗಿರುವೆನು.
ಕೀರ್ತನೆಗಳು 118
5 ಇಕ್ಕಟ್ಟಿನೊಳಗಿಂದ ಕರ್ತನಿಗೆ ಕೂಗಿದೆನು; ಕರ್ತನು ಉತ್ತರ ಕೊಟ್ಟು ನನ್ನನ್ನು ವಿಶಾಲ ಸ್ಥಳದಲ್ಲಿ ನಿಲ್ಲಿಸಿ ದನು.
6 ಕರ್ತನು ನನ್ನ ಪರವಾಗಿದ್ದಾನೆ; ನಾನು ಭಯಪಡೆನು; ಮನುಷ್ಯನು ನನಗೆ ಏನು ಮಾಡುವನು?
7 ನನಗೆ ಸಹಾಯ ಮಾಡುವವರೊಂದಿಗೆ ಕರ್ತನು ನನ್ನ ಪಕ್ಷವನ್ನು ಹಿಡಿಯುತ್ತಾನೆ. ಆದದರಿಂದ ನಾನು ನನ್ನ ಹಗೆಯವರ ಮೇಲೆ ನನ್ನಾಶೆಯನ್ನು ತೀರಿಸು ವದನ್ನು ನಾನು ನೋಡುವೆನು.
8 ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು.
9 ಅಧಿಪತಿಗಳಲ್ಲಿ ಭರವಸವಿಡುವದಕ್ಕಿಂತ ಕರ್ತನನ್ನು ನಂಬಿಕೊಳ್ಳುವದು ಒಳ್ಳೇದು.
ಕೀರ್ತನೆಗಳು 56
2 ಓ ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ.
3 ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು.
4 ದೇವರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯಪಡೆನು, ಮನುಷ್ಯನು ನನಗೆ ಏನು ಮಾಡಬಲ್ಲನು?
5 ಪ್ರತಿದಿನ ಅವರು ನನ್ನ ಮಾತುಗಳನ್ನು ಅಪಾರ್ಥ ಮಾಡುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ನನ್ನ ಕೇಡಿಗಾಗಿವೆ.
6 ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.
ಕೀರ್ತನೆಗಳು 27
1 ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
ಕೀರ್ತನೆಗಳು 23
4 ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
5 ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.
1 ಪೇತ್ರನು 5
5 ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
6 ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.
7 ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.
8 ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
9 ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ.
ಪುನಃಸ್ಥಾಪನೆಯ ಒಡಂಬಡಿಕೆ
ಯೆಶಾಯ 41
8 ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ;
9 ನಿನ್ನನ್ನು ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ಕೊನೆಯಿಂದ ಕರೆದು–ನೀನು ನನ್ನ ಸೇವಕನು, ನಿನ್ನನ್ನು ನಾನು ಆದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವದಿಲ್ಲ.
10 ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
11 ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು;
12 ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನ್ನ ಸಂಗಡ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು.
13 ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.
14 ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
15 ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ.
16 ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
ಯೆಶಾಯ 54
1 ಓ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವನ್ನೆತ್ತಿ ಗಟ್ಟಿಯಾಗಿ ಕೂಗು! ಮದುವೆ ಯಾದವಳಿಗಿಂತ ಆಗದವಳಿಗೆ ಮಕ್ಕಳು ಹೆಚ್ಚು ಎಂದು ಕರ್ತನು ಹೇಳುತ್ತಾನೆ.
2 ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ನಿನ್ನ ನಿವಾಸದ ಪರದೆಗಳು ಹರಡಲಿ; ಹಿಂತೆ ಗೆಯಬೇಡ; ನಿನ್ನ ಹಗ್ಗಗಳನ್ನು ಉದ್ದ ಮಾಡಿ ಗೂಟ ಗಳನ್ನು ಬಲಪಡಿಸು.
3 ನೀನು ಬಲಗಡೆಗೂ ಎಡ ಗಡೆಗೂ ಹಬ್ಬಿಕೊಳ್ಳುವಿ; ನಿನ್ನ ಸಂತಾನವು ಅನ್ಯ ಜನಾಂಗಗಳನ್ನು ವಶಪಡಿಸಿಕೊಂಡು ಹಾಳಾದ ಪಟ್ಟಣ ಗಳನ್ನು ನಿವಾಸವಾಗಮಾಡುವದು.
4 ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ.
5 ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
6 ನೀನು ಬಿಡಲ್ಪಟ್ಟು ಆತ್ಮದಲ್ಲಿ ವ್ಯಥೆಪಟ್ಟ ಹೆಂಗಸು, ತ್ಯಜಿಸಲ್ಪಟ್ಟವಳಾದ ಯೌವನದ ಪತ್ನಿಯ ಹಾಗೆ ಇದ್ದಾಗ ಕರ್ತನು ನಿನ್ನನ್ನು ಕರೆದಿದ್ದಾನೆ ಎಂದು ನಿನ್ನ ದೇವರು ಹೇಳುತ್ತಾನೆ.
7 ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು.
8 ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.
ಯೆಶಾಯ 43
1 ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ–ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
2 ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
ಯೆಶಾಯ 35
3 ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ.
4 ಭಯಭ್ರಾಂತ ಹೃದಯವುಳ್ಳವರಿಗೆ–ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
5 ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು.
6 ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
7 ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು.
8 ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
9 ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.
10 ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
ಪೌಲನು – ಸಭೆಯವರಿಗೆ
1 ಕೊರಿಂಥದವರಿಗೆ 16
13 ಜಾಗರೂಕರಾಗಿರಿ, ವಿಶ್ವಾಸದಲ್ಲಿ ದೃಢರಾಗಿರಿ, ಧೈರ್ಯಶಾಲಿಗಳಾಗಿರಿ, ಸ್ಥೈರ್ಯದಿಂದ ಬಾಳಿರಿ.
14 ನೀವು ಮಾಡುವದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.
15 ಸ್ತೆಫನನ ಮನೆಯವರು ಅಕಾಯದ ಪ್ರಥಮ ಫಲವೆಂದೂ ಅವರು ಪರಿಶುದ್ಧರ ಸೇವೆಯಲ್ಲಿ ತಮ್ಮನ್ನು ಒಪ್ಪಿಸಿಕೊಟ್ಟಿದ್ದರೆಂದೂ ನಿಮಗೆ ತಿಳಿದದೆ.
16 ಆದದರಿಂದ ಅಂಥವರಿಗೂ ನಮ್ಮೊಂದಿಗೆ ಸಹಾಯ ಮಾಡುತ್ತಾ ಪ್ರಯಾಸಪಡುವ ಪ್ರತಿಯೊಬ್ಬನಿಗೂ ನೀವು ಅಧೀನರಾಗಬೇಕೆಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
17 ಸ್ತೆಫನನೂ ಫೊರ್ತುನಾತನೂ ಅಖಾಯಿಕನೂ ಬಂದದರಿಂದ ನನಗೆ ಸಂತೋಷ ವಾಯಿತು. ನೀವು ಇಲ್ಲದ್ದರಿಂದ ಉಂಟಾದ ಕೊರತೆ ಯನ್ನು ಅವರು ನೀಗಿಸಿದರು.
18 ಅವರು ನನ್ನ ಆತ್ಮವನ್ನೂ ನಿಮ್ಮ ಆತ್ಮಗಳನ್ನೂ ಉಪಶಮನ ಮಾಡಿದರು. ಇಂಥವರನ್ನು ಸನ್ಮಾನಿಸಿರಿ.
ಇಬ್ರಿಯರಿಗೆ 13
5 ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ–ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
6 ಆದದರಿಂದ–ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
7 ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.
1 ಪೇತ್ರನು 3
10 ಜೀವವನ್ನು ಪ್ರೀತಿಸಿ ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟ ದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ.
11 ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.
12 ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.
13 ನೀವು ಒಳ್ಳೇದನ್ನು ಅನುಸರಿಸುವವರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?
14 ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.
15 ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;
ಯೇಸು ಭಯದ ಮೇಲೆ ಬೋಧಿಸುತ್ತಾನೆ
ಮಾರ್ಕನು 4
35 ಅದೇ ದಿವಸ ಸಾಯಂಕಾಲವಾದಾಗ ಆತನು ಅವರಿಗೆ–ನಾವು ಆಚೇದಡಕ್ಕೆ ಹೋಗೋಣ ಅಂದನು.
36 ಅವರು ಆ ಜನಸಮೂಹವನ್ನು ಕಳುಹಿ ಸಿದ ಮೇಲೆ ಆತನು ದೋಣಿಯಲ್ಲಿ ಇದ್ದ ಹಾಗೆಯೇ ಅವರು ಆತನನ್ನು ಕರೆದುಕೊಂಡು ಹೋದರು; ಆತನೊಂದಿಗೆ ಬೇರೆ ಚಿಕ್ಕದೋಣಿಗಳೂ ಇದ್ದವು.
37 ಆಗ ಅಲ್ಲಿ ದೊಡ್ಡ ಬಿರುಗಾಳಿಯಿಂದ ತುಫಾನು ಎದ್ದು ತೆರೆಗಳು ದೋಣಿಯೊಳಕ್ಕೆ ಬಡಿದದ್ದರಿಂದ ಅದು ತುಂಬಿಕೊಂಡಿತು.
38 ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ನಿದ್ರಿಸುತ್ತಿದ್ದನು. ಆಗ ಅವರು ಆತನನ್ನು ಎಬ್ಬಿಸಿ ಆತನಿಗೆ–ಒಡೆಯನೇ, ನಾವು ನಾಶವಾಗುತ್ತೇವೆಂದು ನಿನಗೆ ಚಿಂತೆಯಿಲ್ಲವೋ ಅಂದರು.
39 ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ–ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
40 ಮತ್ತು ಆತನು ಅವರಿಗೆ–ಯಾಕೆ ನೀವು ಇಷ್ಟೊಂದು ಭಯಭರಿತರಾಗಿದ್ದೀರಿ? ನಿಮಗೆ ನಂಬಿಕೆ ಇಲ್ಲದಿರುವದು ಹೇಗೆ ಅಂದನು.
41 ಆಗ ಅವರು ಇನ್ನಷ್ಟು ಭಯಪಟ್ಟವರಾಗಿ–ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
ಮತ್ತಾಯನು 14
22 ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು.
23 ಆತನು ಜನಸಮೂಹಗಳನ್ನು ಕಳುಹಿಸಿದ ಮೇಲೆ ಪ್ರಾರ್ಥನೆ ಮಾಡಲು ಏಕಾಂತವಾಗಿ ಗುಡ್ಡದ ಮೇಲೆ ಹೋದನು; ಸಾಯಂಕಾಲವಾದಾಗ ಆತನೊಬ್ಬನೇ ಅಲ್ಲಿ ಇದ್ದನು.
24 ಆಗ ದೋಣಿಯು ಸಮುದ್ರದ ಮಧ್ಯದಲ್ಲಿದ್ದು ತೆರೆಗಳಿಂದ ಬಡಿಯಲ್ಪಡುತ್ತಿತ್ತು; ಯಾಕಂದರೆ ಗಾಳಿಯು ಎದುರಾಗಿತ್ತು.
25 ಮತ್ತು ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಹೋದನು.
26 ಆತನು ಸಮುದ್ರದ ಮೇಲೆ ನಡೆಯುವದನ್ನು ಶಿಷ್ಯರು ನೋಡಿ ಕಳವಳಪಟ್ಟು–ಇದು ಭೂತ ಎಂದು ಭೀತಿಯಿಂದ ಕೂಗಿ ಕೊಂಡರು.
27 ಆದರೆ ಯೇಸು ತಕ್ಷಣವೇ ಮಾತನಾಡಿ ಅವರಿಗೆ–ಧೈರ್ಯವಾಗಿರ್ರಿ; ನಾನೇ, ಭಯಪಡಬೇಡಿರಿಅಂದನು.
28 ಆಗ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ–ಕರ್ತನೇ, ನೀನೇ ಆಗಿದ್ದರೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರಲು ನನಗೆ ಅಪ್ಪಣೆಕೊಡು ಅಂದನು.
29 ಅದಕ್ಕಾತನು–ಬಾ ಅಂದನು. ಆಗ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ಹೋಗು ವದಕ್ಕಾಗಿ ನೀರಿನ ಮೇಲೆ ನಡೆದನು.
30 ಆದರೆ ಬಲ ವಾದ ಗಾಳಿಯನ್ನು ನೋಡಿದಾಗ ಅವನು ಭಯಪಟ್ಟು ಮುಣುಗುತ್ತಾ–ಕರ್ತನೇ, ನನ್ನನ್ನು ರಕ್ಷಿಸು ಎಂದು ಕೂಗಿ ಹೇಳಿದನು.
31 ತಕ್ಷಣವೇ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು–ಓ ಅಲ್ಪ ವಿಶ್ವಾಸಿಯೇ, ನೀನು ಯಾಕೆ ಸಂದೇಹಪಟ್ಟೆ ಎಂದು ಅವನಿಗೆ ಹೇಳಿದನು.
32 ಅವರು ದೋಣಿಯೊಳಗೆ ಬಂದಾಗ ಗಾಳಿನಿಂತು ಹೋಯಿತು.
33 ದೋಣಿಯಲ್ಲಿದ್ದವರು ಆತನ ಬಳಿಗೆ ಬಂದು ಆತನನ್ನು ಆರಾಧಿಸಿ–ನಿಜವಾಗಿಯೂ ನೀನು ದೇವಕುಮಾರನೇ ಎಂದು ಹೇಳಿದರು.
34 ಅವರು ದಾಟಿ ಗೆನೆಜರೇತ್ ಸೀಮೆಗೆ ಬಂದರು.
35 ಆಗ ಅಲ್ಲಿದ್ದ ಜನರು ಆತನ ಗುರುತು ಹಿಡಿದು ಸುತ್ತ ಮುತ್ತಲಿನ ಸೀಮೆಗೆಲ್ಲಾ ಹೇಳಿಕಳುಹಿಸಿ ರೋಗಿಗಳ ನ್ನೆಲ್ಲಾ ಆತನ ಬಳಿಗೆ ತಂದರು.
36 ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.
ಲೂಕನು 8
22 ಇದಾದ ಮೇಲೆ ಒಂದಾನೊಂದು ದಿವಸ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ಅವರಿಗೆ–ನಾವು ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಹೇಳಿದಾಗ ಅವರು ಹೊರಟರು.
23 ಆದರೆ ಅವರು ಪ್ರಯಾಣಮಾಡುತ್ತಿದ್ದಾಗ ಆತನು ನಿದ್ರಿ ಸಿದನು; ಆಗ ಬಿರುಗಾಳಿಯು ಕೆರೆಯ ಮೇಲೆ ಬೀಸಲು ದೋಣಿಯೊಳಗೆ ನೀರು ತುಂಬಿದ್ದರಿಂದ ಅವರು ಪ್ರಾಣಾಪಾಯಕ್ಕೊಳಗಾದರು.
24 ಆಗ ಅವರು ಆತನ ಬಳಿಗೆ ಬಂದು ಆತನನ್ನು ಎಬ್ಬಿಸಿ–ಬೋಧ ಕನೇ, ಬೋಧಕನೇ, ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ್ನೂ ಗದರಿಸಿದನು; ಆಗ ಅವು ನಿಂತು ಹೋಗಿ ಅಲ್ಲಿ ಶಾಂತತೆ ಉಂಟಾಯಿತು.
25 ಆಗ ಆತನು ಅವರಿಗೆ–ನಿಮ್ಮ ನಂಬಿಕೆ ಎಲ್ಲಿ ಅಂದನು. ಆಗ ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು– ಈತನು ಎಂಥಾ ಮನುಷ್ಯನು? ಯಾಕಂದರೆ ಈತನು ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವುಗಳು ಆತನಿಗೆ ವಿಧೇಯವಾಗು ತ್ತವಲ್ಲಾ ಎಂದು ಮಾತನಾಡಿಕೊಂಡರು.
ಎಲೀಯನ ಭಯ
2 ಅರಸುಗಳು 1
6 ಅವರು ಅವನಿಗೆ ಹೇಳಿದ್ದೇನಂದರೆ–ಒಬ್ಬ ಮನು ಷ್ಯನು ಎದುರಾಗಿ ಬಂದು ನಮಗೆ–ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ತಿರುಗಿ ಹೋಗಿ– ಇಸ್ರಾ ಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ಕಳುಹಿಸುವದೇನು? ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆಂಬದಾಗಿ ಅವನಿಗೆ ಹೇಳಿರಿ ಅಂದನು.
7 ಅವನು ಅವರಿಗೆನಿಮಗೆದುರಾಗಿ ಬಂದು ಈ ಮಾತುಗಳನ್ನು ನಿಮಗೆ ಹೇಳಿದ ಮನುಷ್ಯನು ಯಾವ ತರದವನಾಗಿದ್ದಾನೆಂದು ಕೇಳಿದನು.
8 ಅದಕ್ಕವರು–ಅವನು ಕೂದಲುಳ್ಳ ಮನು ಷ್ಯನು; ಅವನ ನಡುವಿನ ಸುತ್ತಲು ತೊಗಲಿನ ನಡುಕಟ್ಟು ಇತ್ತು ಅಂದರು. ಅದಕ್ಕೆ ಅವನು–ತಿಷ್ಬೀಯನಾದ ಎಲೀಯನು ಎಂದು ಹೇಳಿದನು.
9 ಆಗ ಅರಸನು ಐವತ್ತು ಮಂದಿಗೆ ಪ್ರಧಾನನನ್ನು ಅವನ ಐವತ್ತು ಮಂದಿಯ ಸಂಗಡ ಇವನ ಬಳಿಗೆ ಕಳುಹಿಸಿದನು. ಅವನು ಇವನ ಬಳಿಗೆ ಹೋದಾಗ ಇಗೋ, ಇವನು ಬೆಟ್ಟದ ತುದಿಯ ಮೇಲೆ ಕುಳಿತಿದ್ದನು. ಆಗ ಅವನು ಎಲೀಯನಿಗೆ–ದೇವರ ಮನುಷ್ಯನೇ, ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
10 ಅದಕ್ಕೆ ಎಲೀಯನು ಐವತ್ತು ಮಂದಿಯ ಪ್ರಧಾನನಿಗೆ ಪ್ರತ್ಯುತ್ತರವಾಗಿ–ನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು.
11 ತಿರುಗಿ ಅರಸನು ಇವನ ಬಳಿಗೆ ಐವತ್ತು ಮಂದಿಯ ಪ್ರಧಾನ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಅವನು ಬಂದು ಇವನಿಗೆ–ದೇವರ ಮನುಷ್ಯನೇ, ಬೇಗ ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
12 ಎಲೀಯನು ಅವರಿಗೆ ಪ್ರತ್ಯುತ್ತರವಾಗಿನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶ ದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು.
13 ತಿರುಗಿ ಅವನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಈ ಐವತ್ತು ಮಂದಿಗೆ ಪ್ರಧಾನನಾದ ಮೂರನೆಯ ವನು ಬಂದು ಎಲೀಯನ ಮುಂದೆ ತನ್ನ ಮೊಣ ಕಾಲೂರಿಕೊಂಡು ಇವನಿಗೆ–ದೇವರ ಮನುಷ್ಯನೇ, ನೀನು ದಯೆತೋರು, ನನ್ನ ಪ್ರಾಣವೂ ನಿನ್ನ ಸೇವಕ ರಾದ ಈ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ.
14 ಇಗೋ, ಬೆಂಕಿಯು ಆಕಾಶದಿಂದ ಇಳಿದು ಮೊದಲಿನ ಇಬ್ಬರು ಪ್ರಧಾನರನ್ನೂ ಅವರ ಐವತ್ತು ಮಂದಿಯನ್ನೂ ದಹಿ ಸಿಬಿಟ್ಟಿತು. ಆದರೆ ಈಗ ನನ್ನ ಪ್ರಾಣವು ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ ಎಂದು ಹೇಳಿ ಅವ ನನ್ನು ಬೇಡಿಕೊಂಡನು.
15 ಆಗ ಕರ್ತನ ದೂತನು ಎಲೀಯನಿಗೆ–ಅವನ ಸಂಗಡ ಇಳಿದು ಹೋಗು; ಅವನಿಗೆ ಭಯಪಡಬೇಡ ಅಂದನು.
16 ಹಾಗೆಯೇ ಅವನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋಗಿ ಅವನಿಗೆ–ಆತನ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರು ಇಲ್ಲವೆಂದು ನೀನು ಎಕ್ರೋ ನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಲು ಜನ ರನ್ನು ಕಳುಹಿಸಿದ ಕಾರಣ ನೀನು ಏರಿದ ಮಂಚ ದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
17 ಹಾಗೆಯೇ ಎಲೀಯನು ಹೇಳಿದ ಕರ್ತನ ವಾಕ್ಯದ ಪ್ರಕಾರವೇ ಅವನು ಸತ್ತು ಹೋದನು;
ಎಲೀಷನು ಸೇವಕನಿಗೆ ಕಲಿಸುತ್ತಾನೆ
2 ಅರಸುಗಳು 6
8 ತರುವಾಯ ಅರಾಮ್ಯರ ಅರಸನು ಇಸ್ರಾಯೇಲಿನ ಮೇಲೆ ಯುದ್ಧಮಾಡುತ್ತಿದ್ದನು; ಇಂಥಿಂಥ ಸ್ಥಳದಲ್ಲಿ ತನ್ನ ದಂಡು ಇಳಿಯಬೇಕೆಂದು ತನ್ನ ಸೇವಕರ ಸಂಗಡ ಯೋಚನೆ ಮಾಡಿಕೊಂಡನು.
9 ಆಗ ದೇವರ ಮನು ಷ್ಯನು ಇಸ್ರಾಯೇಲಿನ ಅರಸನಿಗೆ–ಅಂಥಾ ಸ್ಥಳವನ್ನು ಹಾದು ಹೋಗದೆ ಜಾಗ್ರತೆಯಾಗಿ ಇರು; ಯಾಕಂದರೆ ಅರಾಮ್ಯರು ಅಲ್ಲಿಗೆ ಇಳಿದು ಬಂದಿದ್ದಾರೆಂದು ಹೇಳಿ ಕಳುಹಿಸಿದನು.
10 ಹೀಗೆಯೇ ದೇವರ ಮನುಷ್ಯನು ತನ್ನನ್ನು ಎಚ್ಚರಿಸಿ ತನಗೆ ಹೇಳಿದ ಸ್ಥಳಕ್ಕೆ ಇಸ್ರಾಯೇಲಿನ ಅರಸನು ಹೇಳಿಕಳುಹಿಸಿ ತನ್ನನ್ನು ರಕ್ಷಿಸಿಕೊಂಡನು; ಹೀಗಾದದ್ದು ಒಂದೆರಡು ಸಾರಿ ಮಾತ್ರವೇ ಅಲ್ಲ.
11 ಆದದರಿಂದ ಅರಾಮ್ಯರ ಅರಸನ ಹೃದಯವು ಇದರ ನಿಮಿತ್ತ ಕಳವಳಗೊಂಡು ಅವನು ತನ್ನ ಸೇವಕರನ್ನು ಕರೆದು ಅವರಿಗೆ–ನಮ್ಮಲ್ಲಿ ಇಸ್ರಾಯೇ ಲಿನ ಅರಸನ ಕಡೆಯವನು ಯಾರು? ನೀವು ನನಗೆ ತಿಳಿಸುವದಿಲ್ಲವೋ ಅಂದನು.
12 ಅವನ ಸೇವಕರಲ್ಲಿ ಒಬ್ಬನು–ನನ್ನ ಒಡೆಯನೇ, ಅರಸನೇ, ಯಾವನೂ ಇಲ್ಲ. ಆದರೆ ಇಸ್ರಾಯೇಲಿನಲ್ಲಿರುವ ಪ್ರವಾದಿಯಾದ ಎಲೀಷನು ಇದ್ದಾನೆ; ನೀನು ನಿನ್ನ ಮಲಗುವ ಮನೆ ಯಲ್ಲಿ ಹೇಳುವ ಮಾತುಗಳನ್ನು ಇಸ್ರಾಯೇಲಿನ ಅರಸ ನಿಗೆ ಹೇಳುತ್ತಾನೆ ಅಂದನು.
13 ಆಗ ಅವನು–ನಾನು ಕಳುಹಿಸಿ ಅವನನ್ನು ಹಿಡಿಯುವ ಹಾಗೆ ನೀನು ಹೋಗಿ ಅವನು ಎಲ್ಲಿದ್ದಾನೋ ನೋಡಿರಿ ಅಂದನು. ಆಗ ಇಗೋ, ದೋತಾನಿನಲ್ಲಿದ್ದಾನೆಂದು ಅವನಿಗೆ ತಿಳಿಸಿದರು.
14 ಆದದರಿಂದ ಅವನು ಅಲ್ಲಿಗೆ ಕುದುರೆ ಗಳನ್ನೂ ರಥಗಳನ್ನೂ ಮಹಾಸೈನ್ಯವನ್ನೂ ಕಳುಹಿಸಿ ದನು. ಅವರು ರಾತ್ರಿಯಲ್ಲಿ ಬಂದು ಪಟ್ಟಣವನ್ನು ಸುತ್ತಿಕೊಂಡರು.
15 ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ ಇಗೋ, ಕುದುರೆಗಳೂ ರಥಗಳುಳ್ಳ ಸೈನ್ಯವೂ ಪಟ್ಟಣವನ್ನು ಸುತ್ತಿಕೊಂಡಿತು. ಆಗ ಆ ಸೇವಕನು ಅವನಿಗೆ–ಅಯ್ಯೋ, ನನ್ನ ಯಜಮಾನನೇ, ನಾವು ಏನು ಮಾಡು ವದು ಅಂದನು.
16 ಅದಕ್ಕವನು–ಭಯಪಡಬೇಡ; ಅವರ ಸಂಗಡ ಇರುವವರಿಗಿಂತ ನಮ್ಮ ಸಂಗಡ ಇರುವ ವರು ಹೆಚ್ಚಾಗಿದ್ದಾರೆ ಅಂದನು.
17 ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು.
18 ಅವರು ಇವನ ಬಳಿಗೆ ಇಳಿದು ಬಂದಾಗ ಎಲೀಷನು–ಕರ್ತನೇ, ನೀನು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡು ಎಂದು ಪ್ರಾರ್ಥಿ ಸಿದನು. ಆಗ ಎಲೀಷನ ಮಾತಿನ ಹಾಗೆಯೇ ಆತನು ಅವರನ್ನು ಕುರುಡರನ್ನಾಗಿ ಮಾಡಿದನು.
19 ಆಗ ಎಲೀ ಷನು ಅವರಿಗೆ–ಇದು ಆ ಮಾರ್ಗವಲ್ಲ, ಇದು ಆ ಪಟ್ಟಣವಲ್ಲ, ನನ್ನ ಹಿಂದೆ ಬನ್ನಿರಿ; ನೀವು ಹುಡುಕುವ ಮನುಷ್ಯನ ಬಳಿಗೆ ನಿಮ್ಮನ್ನು ಬರಮಾಡುವೆನು ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ನಡಿಸಿದನು.
20 ಅವರು ಸಮಾರ್ಯಕ್ಕೆ ಬಂದಾಗ ಏನಾಯಿತಂದರೆ, ಎಲೀ ಷನು–ಕರ್ತನೇ, ಇವರು ನೋಡುವ ಹಾಗೆ ಇವರ ಕಣ್ಣುಗಳನ್ನು ತೆರೆ ಅಂದನು. ಆಗ ಕರ್ತನು ಅವರ ಕಣ್ಣುಗಳನ್ನು ತೆರೆದನು; ಅವರು ನೋಡಿದಾಗ ಇಗೋ, ಸಮಾರ್ಯದ ಮಧ್ಯದಲ್ಲಿದ್ದರು.
21 ಇಸ್ರಾಯೇಲಿನ ಅರಸನು ಅವರನ್ನು ಕಂಡಾಗ ಎಲೀಷನಿಗೆ–ನನ್ನ ತಂದೆಯೇ, ನಾನು ಹೊಡೆಯಲೋ? ಹೊಡೆಯ ಲೋ? ಅಂದನು.
22 ಅದಕ್ಕವನು–ಹೊಡೆಯಬೇಡ; ನೀನು ನಿನ್ನ ಕತ್ತಿಯಿಂದಲೂ ನಿನ್ನ ಬಿಲ್ಲಿನಿಂದಲೂ ಸೆರೆಯಾಗಿ ತೆಗೆದುಕೊಳ್ಳುವವರನ್ನು ಹೊಡೆಯುತ್ತೀ ಯೋ? ರೊಟ್ಟಿಯನ್ನೂ ನೀರನ್ನೂ ಇವರ ಮುಂದೆ ಇಡು; ಅವರು ತಿಂದು ಕುಡಿದು ತಮ್ಮ ಯಜಮಾನನ ಬಳಿಗೆ ಹೋಗಲಿ ಅಂದನು.
23 ಆಗ ಅರಸನು ಅವರಿಗೋಸ್ಕರ ದೊಡ್ಡ ಔತಣ ಮಾಡಿಸಿದನು. ಅವರು ತಿಂದು ಕುಡಿದ ತರುವಾಯ ಅವರನ್ನು ಕಳುಹಿಸಿ ಬಿಟ್ಟನು. ಅವರು ತಮ್ಮ ಯಜಮಾನನ ಬಳಿಗೆ ಹೋದರು. ಅರಾಮ್ಯರ ದಂಡುಗಳು ಇಸ್ರಾಯೇಲ್ ದೇಶದಲ್ಲಿ ತಿರಿಗಿ ಬಾರದೆ ಹೋದವು.
ಅಬ್ರಾಮನೊಂದಿಗೆ ಕರ್ತನ ಒಡಂಬಡಿಕೆ
ಆದಿಕಾಂಡ 15
1 ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು–ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
2 ಅದಕ್ಕೆ ಅಬ್ರಾಮನು–ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ಈ ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು.
3 ಅಬ್ರಾಮನು–ಇಗೋ, ನೀನು ನನಗೆ ಸಂತಾನವನ್ನು ಕೊಡಲಿಲ್ಲ; ಇಗೋ, ನನ್ನ ಮನೆಯಲ್ಲಿ ಹುಟ್ಟಿದವನು ನನಗೆ ಬಾಧ್ಯನಾಗಿ ರುವನು ಅಂದಾಗ
4 ಇಗೋ, ಕರ್ತನ ವಾಕ್ಯವು ಅವನಿಗೆ ಉಂಟಾಗಿ–ಇವನು ನಿನಗೆ ಬಾಧ್ಯನಾಗುವ ದಿಲ್ಲ. ನಿನ್ನಿಂದ ಹುಟ್ಟಿದವನೇ ನಿನಗೆ ಬಾಧ್ಯನಾಗುವನು ಅಂದನು.
5 ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು–ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ–ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.
6 ಅಬ್ರಾ ಮನು ಕರ್ತನಲ್ಲಿ ನಂಬಿಕೆಯಿಟ್ಟನು. ಆತನು ಅದನ್ನು ಅವನಿಗೆ ನೀತಿ ಎಂದು ಎಣಿಸಿದನು.
ಇಸಾಕನೊಂದಿಗೆ ಕರ್ತನ ಒಡಂಬಡಿಕೆ
ಆದಿಕಾಂಡ 26
16 ಆಗ ಅಬೀಮೆಲೆಕನು ಇಸಾಕನಿಗೆ–ನೀನು ನಮಗಿಂತ ಬಲಿಷ್ಟನಾದಿ ಆದುದ ರಿಂದ ನಮ್ಮ ಬಳಿಯಿಂದ ಹೋಗು, ಅಂದನು.
17 ಆಗ ಇಸಾಕನು ಅಲ್ಲಿಂದ ಹೋಗಿ ಗೆರಾರಿನ ತಗ್ಗಿನಲ್ಲಿ ಗುಡಾರ ಹಾಕಿ ಅಲ್ಲಿ ವಾಸಮಾಡಿದನು.
18 ಇದಲ್ಲದೆ ಇಸಾಕನು ತನ್ನ ತಂದೆಯಾದ ಅಬ್ರಹಾ ಮನ ದಿನಗಳಲ್ಲಿ ಅಗಿದಂಥ ಬಾವಿಗಳನ್ನು ತಿರಿಗಿ ಅಗಿದನು. ಯಾಕಂದರೆ ಅಬ್ರಹಾಮನು ಸತ್ತ ಮೇಲೆ ಫಿಲಿಷ್ಟಿಯರು ಅವುಗಳನ್ನು ಮುಚ್ಚಿದ್ದರು. ಅವುಗಳಿಗೆ ತನ್ನ ತಂದೆಯು ಕೊಟ್ಟ ಹೆಸರುಗಳ ಪ್ರಕಾರವೇ ಅವನು ಅವುಗಳಿಗೆ ಹೆಸರು ಕೊಟ್ಟನು.
19 ಇಸಾಕನ ಸೇವಕರು ತಗ್ಗಿನಲ್ಲಿ ಅಗಿದಾಗ ಅಲ್ಲಿ ಅವರಿಗೆ ಒಂದು ಉಕ್ಕುವ ಒರತೆಯ ಬಾವಿಯು ಸಿಕ್ಕಿತು.
20 ಗೆರಾರಿನ ಮಂದೆಯನ್ನು ಮೇಯಿಸುವವರು –ಈ ನೀರು ನಮ್ಮದು ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಆ ಬಾವಿಗೆ ಏಸೆಕ್ ಎಂದು ಹೆಸರಿಟ್ಟನು.
21 ತರುವಾಯ ಅವರು ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿಯೂ ಅವರು ಜಗಳವಾಡಿದಾಗ ಅವನು ಅದಕ್ಕೆ ಸಿಟ್ನಾ ಎಂದು ಹೆಸರಿಟ್ಟನು.
22 ಅಲ್ಲಿಂದ ಅವನು ಹೊರಟುಹೋಗಿ ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿ ಅವರು ಜಗಳವಾಡಲಿಲ್ಲ. ಅದಕ್ಕೆ ಅವನು–ಈಗ ಕರ್ತನು ನಮಗೆ ಸ್ಥಳವನ್ನು ಮಾಡಿದ್ದಾನೆ; ನಾವು ಈ ದೇಶದಲ್ಲಿ ಅಭಿವೃದ್ಧಿ ಯಾಗುವೆವು ಎಂದು ಹೇಳಿ ಅದಕ್ಕೆ ರೆಹೋಬೋತ್ ಎಂದು ಹೆಸರಿಟ್ಟನು.
23 ಅಲ್ಲಿಂದ ಅವನು ಬೇರ್ಷೆಬಕ್ಕೆ ಏರಿಹೋದನು.
24 ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ ಕಾಣಿಸಿ ಕೊಂಡು–ನಿನ್ನ ತಂದೆಯಾದ ಅಬ್ರಹಾಮನ ದೇವರು ನಾನೇ; ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಅಂದನು.
25 ಆಗ ಅವನು ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡು ಅಲ್ಲಿ ತನ್ನ ಗುಡಾರ ವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗಿದರು.
ಹಾಗರಳೊಂದಿಗೆ ಕರ್ತನ ಒಡಂಬಡಿಕೆ
ಆದಿಕಾಂಡ 21
8 ಆ ಮಗುವು ಬೆಳೆದು ಮೊಲೆ ಬಿಟ್ಟಿತು; ಇಸಾಕನನ್ನು ಮೊಲೆ ಬಿಡಿಸಿದ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.
9 ಇದಲ್ಲದೆ ಐಗುಪ್ತ್ಯ ಳಾದ ಹಾಗರಳು ಅಬ್ರಹಾಮನಿಗೆ ಹೆತ್ತಿದ್ದ ಮಗನು ಹಾಸ್ಯಮಾಡುವದನ್ನು ಸಾರಳು ನೋಡಿ
10 ಅಬ್ರ ಹಾಮನಿಗೆ–ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು.
11 ಈ ಮಾತು ಅಬ್ರಹಾಮನಿಗೆ ಅವನ ಮಗನ ದೆಸೆಯಿಂದ ಬಹು ದುಃಖಕರವಾಗಿ ತೋಚಿತು.
12 ಆಗ ದೇವರು ಅಬ್ರಹಾಮನಿಗೆ–ಹುಡುಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗದೆ ಇರಲಿ; ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು; ಯಾಕಂದರೆ ಇಸಾಕನಲ್ಲಿ ನಿನ್ನ ಸಂತತಿಯು ಕರೆಯಲ್ಪ ಡುವದು.
13 ದಾಸಿಯ ಮಗನು ಸಹ ನಿನ್ನ ಸಂತಾನವಾಗಿರುವದರಿಂದ ಅವನನ್ನು ನಾನು ಜನಾಂಗ ವಾಗ ಮಾಡುವೆನು ಅಂದನು.
14 ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.
15 ತಿತ್ತಿಯೊಳಗಿನ ನೀರು ಮುಗಿದಾಗ ಆಕೆಯು ಮಗುವನ್ನು ಗಿಡಗಳಲ್ಲಿ ಒಂದರ ಕೆಳಗೆ ಮಲಗಿಸಿ
16 ಬಿಲ್ಲೆಸೆಯುವಷ್ಟು ದೂರ ಹೋಗಿ ಅವನಿಗೆ ಎದುರಾಗಿ ಕೂತುಕೊಂಡು–ಮಗುವಿನ ಸಾವನ್ನು ನಾನು ನೋಡಲಾರೆನು ಎಂದು ಹೇಳಿ ಆಕೆಯು ತನ್ನ ಸ್ವರವೆತ್ತಿ ಅತ್ತಳು.
17 ಆಗ ದೇವರು ಆ ಹುಡುಗನ ಸ್ವರವನ್ನು ಕೇಳಿದನು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು ಆಕೆಗೆ–ಹಾಗರಳೇ, ನಿನ್ನ ವ್ಯಥೆಯೇನು? ಅಂಜಬೇಡ; ದೇವರು ಹುಡುಗನ ಸ್ವರವನ್ನು ಅವನು ಇದ್ದಲ್ಲಿಂದ ಕೇಳಿದ್ದಾನೆ.
18 ಎದ್ದು ಹುಡುಗನನ್ನು ಎತ್ತಿಕೊಂಡು ಅವನನ್ನು ನಿನ್ನ ಕೈಯಲ್ಲಿ ತಕ್ಕೋ; ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು ಅಂದನು.
19 ಆಗ ದೇವರು ಆಕೆಯ ಕಣ್ಣುಗಳನ್ನು ತೆರೆದನು; ಆಕೆಯು ನೀರಿನ ಬಾವಿಯನ್ನು ನೋಡಿ ತಿತ್ತಿಯಲ್ಲಿ ನೀರನ್ನು ತುಂಬಿಸಿ ಹುಡುಗನಿಗೆ ಕುಡಿಯಲು ಕೊಟ್ಟಳು.
20 ದೇವರು ಆ ಹುಡುಗನ ಸಂಗಡ ಇದ್ದನು. ಅವನು ಬೆಳೆದು ಅರಣ್ಯದಲ್ಲಿ ವಾಸಮಾಡಿ ಬಿಲ್ಲುಗಾರ ನಾದನು.
21 ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿಯು ಅವನಿಗೋಸ್ಕರ ಐಗುಪ್ತದೇಶದಿಂದ ಹೆಂಡತಿಯನ್ನು ತಕ್ಕೊಂಡಳು.
ಯಾಕೋಬನೊಂದಿಗೆ ದೇವರ ಒಡಂಬಡಿಕೆ
ಆದಿಕಾಂಡ 46
1. ಇಸ್ರಾಯೇಲನು ತನಗಿದ್ದದ್ದನ್ನೆಲ್ಲಾ ತಕ್ಕೊಂಡು ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಬಲಿಗಳನ್ನು ಅರ್ಪಿಸಿ ದನು.
2. ದೇವರು ಇಸ್ರಾಯೇಲನಿಗೆ ರಾತ್ರಿ ದರ್ಶನ ದಲ್ಲಿ ಮಾತನಾಡಿ–ಯಾಕೋಬನೇ, ಯಾಕೋಬನೇ ಅಂದನು. ಅದಕ್ಕವನು–ಇಗೋ, ಇದ್ದೇನೆ ಅಂದನು.
3. ಆತನು ಅವನಿಗೆ–ನಿನ್ನ ತಂದೆಯ ದೇವರಾಗಿರುವ ದೇವರು ನಾನೇ. ನೀನು ಐಗುಪ್ತಕ್ಕೆ ಇಳಿದು ಹೋಗು ವದಕ್ಕೆ ಭಯಪಡಬೇಡ; ಯಾಕಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡಜನಾಂಗವಾಗ ಮಾಡುವೆನು.
4. ನಾನು ನಿನ್ನ ಸಂಗಡ ಐಗುಪ್ತಕ್ಕೆ ಹೋಗುವೆನು. ನಾನೇ ನಿಶ್ಚಯವಾಗಿ ನಿನ್ನನ್ನು ಮೇಲಕ್ಕೆ (ಕಾನಾನಿಗೆ) ತಿರಿಗಿ ಬರಮಾಡುವೆನು. ಯೋಸೇಫನು ನಿನ್ನ ಕಣ್ಣುಗಳ ಮೇಲೆ ತನ್ನ ಕೈ ಇಡುವನು ಅಂದನು.
5. ಆಗ ಯಾಕೋಬನು ಎದ್ದು ಬೇರ್ಷೆಬದಿಂದ ಹೊರಟನು. ಇಸ್ರಾಯೇಲನ ಮಕ್ಕಳು ತಮ್ಮ ತಂದೆಯಾದ ಯಾಕೋಬನನ್ನೂ ತಮ್ಮ ಚಿಕ್ಕವರನ್ನೂ ತಮ್ಮ ಹೆಂಡತಿಯರನ್ನೂ ಫರೋಹನು ಕಳುಹಿಸಿದ ಬಂಡಿಗಳ ಮೇಲೆ ಏರಿಸಿಕೊಂಡು ಹೋದರು.
6. ಅವರು ತಮ್ಮ ದನಗಳನ್ನೂ ಕಾನಾನ್ ದೇಶದಲ್ಲಿ ತಾವು ಸಂಪಾದಿಸಿದ ತಮ್ಮ ಸಂಪತ್ತನ್ನೂ ತಕ್ಕೊಂಡು ಐಗುಪ್ತಕ್ಕೆ ಬಂದರು. ಯಾಕೋಬನು ತನ್ನ ಎಲ್ಲಾ ಸಂತತಿಯೊಂದಿಗೆ ಬಂದನು.
7. ತನ್ನ ಕುಮಾರ ರನ್ನೂ ಕುಮಾರರ ಕುಮಾರರನ್ನೂ ಕುಮಾರ್ತೆಯರನ್ನೂ ಕುಮಾರರ ಕುಮಾರ್ತೆಯರನ್ನೂ ಅಂತೂ ತನ್ನ ಸಂತತಿ ಯನ್ನೆಲ್ಲಾ ತನ್ನೊಂದಿಗೆ ಐಗುಪ್ತಕ್ಕೆ ಕರಕೊಂಡು ಬಂದನು.
ಬಿಡುಗಡೆಗೆ ಮೋಶೆಯ ಸೂತ್ರ
ವಿಮೋಚನಕಾಂಡ 14
10 ಫರೋಹನು ಸವಿಾಪಕ್ಕೆ ಬರುತ್ತಿರಲು ಇಗೋ, ಇಸ್ರಾಯೇಲ್ ಮಕ್ಕಳು ತಮ್ಮ ಕಣ್ಣುಗಳನ್ನೆತ್ತಿ ಹಿಂದೆ ಬರುತ್ತಿರುವ ಐಗುಪ್ತ್ಯರನ್ನು ಕಂಡು ಇಸ್ರಾಯೇಲ್ ಮಕ್ಕಳು ಬಹಳವಾಗಿ ಭಯಪಟ್ಟು ಕರ್ತನಿಗೆ ಮೊರೆಯಿ ಟ್ಟರು.
11 ಅವರು ಮೋಶೆಗೆ–ಐಗುಪ್ತದಲ್ಲಿ ಸಮಾಧಿ ಗಳು ಇಲ್ಲದ ಕಾರಣ ನಾವು ಅರಣ್ಯದಲ್ಲಿ ಸಾಯುವ ಹಾಗೆ ನಮ್ಮನ್ನು ಕರಕೊಂಡು ಬಂದಿಯೋ? ಯಾಕೆ ನೀನು ಈ ಪ್ರಕಾರ ನಮಗೆ ಮಾಡಿ ನಮ್ಮನ್ನು ಐಗುಪ್ತ ದಿಂದ ಕರಕೊಂಡು ಬಂದಿ?
12 ನಾವು ಐಗುಪ್ತದೇಶ ದಲ್ಲಿದ್ದಾಗಲೇ–ನೀನು ನಮ್ಮ ಗೊಡವೆಗೆ ಬರಬೇಡ; ನಾವು ಐಗುಪ್ತ್ಯರಿಗೆ ಸೇವೆಮಾಡುವೆವು. ನಾವು ಅರಣ್ಯ ದಲ್ಲಿ ಸಾಯುವದಕ್ಕಿಂತ ಐಗುಪ್ತ್ಯರಿಗೆ ಸೇವೆ ಮಾಡು ವದು ಒಳ್ಳೇದಾಗಿತ್ತಲ್ಲವೇ ಎಂದು ಹೇಳಿದರು.
13 ಅದಕ್ಕೆ ಮೋಶೆಯು ಜನರಿಗೆ–ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
14 ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು.
15 ಆಗ ಕರ್ತನು ಮೋಶೆಗೆ–ನೀನು ನನಗೆ ಯಾಕೆ ಮೊರೆಯಿಡುತ್ತೀ? ಇಸ್ರಾಯೇಲ್ ಮಕ್ಕಳು ಮುಂದಕ್ಕೆ ಹೋಗಬೇಕೆಂದು ಹೇಳು.
16 ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು. ಆಗ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು.
17 ಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.
18 ನಾನು ಫರೋ ಹನ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿ ಕೊಂಡಾಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿದು ಕೊಳ್ಳುವರು ಅಂದನು.
ಯೆಹೆಜ್ಕೇಲನಿಗೆ ಪ್ರವಾದಿಯಾಗಲು ಕರೆ
ಯೆಹೆಜ್ಕೇಲನು 2
1 ಆತನು ನನಗೆ ಹೇಳಿದ್ದೇನಂದರೆ–ಮನುಷ್ಯಪುತ್ರನೇ, ನಿನ್ನ ಪಾದದ ಮೇಲೆ ನಿಲ್ಲು; ನಿನ್ನೊಡನೆ ನಾನು ಮಾತನಾಡುವೆನು ಅಂದನು.
2 ಹೀಗೆ ಆತನು ನನ್ನ ಸಂಗಡ ಮಾತನಾಡಿದಾಗ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನಿಂತುಕೊಳ್ಳುವಂತೆ ಮಾಡಿತು; ಈ ರೀತಿ ನನ್ನ ಸಂಗಡ ಮಾತನಾಡುವದನ್ನು ನಾನು ಕೇಳಿದೆನು.
3 ಆತನು ನನಗೆ ಹೇಳಿದ್ದೇನಂದರೆ–ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿಬಿದ್ದಂಥ ಮತ್ತು ಬೀಳುವಂಥ ಜನಾಂಗದವರಾದ ಇಸ್ರಾಯೇಲ್ಯರ ಮಕ್ಕಳ ಬಳಿಗೆ ನಾನು ನಿನ್ನನ್ನು ಕಳುಹಿಸು ತ್ತೇನೆ; ಅವರೂ ಅವರ ಪಿತೃಗಳೂ ಇಂದಿನ ವರೆಗೂ ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ.
4 ಅವರು ನಿರ್ಲಜ್ಜರಾದ ಒರಟು ಹೃದಯವುಳ್ಳ ಮಕ್ಕಳಾಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ ನೀನು ಅವರಿಗೆ–ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳಬೇಕು.
5 ಅವರು ಕೇಳಲಿ ಅಥವಾ ಕೇಳದಿರಲಿ (ಅವರು ತಿರುಗಿಬೀಳುವ ಮನೆಯವರು); ಆದರೆ ತಮ್ಮೊಳಗೆ ಒಬ್ಬ ಪ್ರವಾದಿ ಇರುವನೆಂದು ತಿಳಿದು ಕೊಂಡರೆ ಸಾಕು.
6 ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ.
7 ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ.
8 ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವ ದನ್ನು ಕೇಳು; ಆ ತಿರುಗಿಬೀಳುವವರ ಮನೆಯ ಹಾಗೆ ನೀನೂ ತಿರುಗಿಬೀಳಬೇಡ; ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವದನ್ನು ತಿನ್ನು ಅಂದನು.
ಯೆರೆಮಿಯನ ಕರೆ
ಯೆರೆಮಿಯ 1
4 ಕರ್ತನ ವಾಕ್ಯವು ನನಗೆ ಉಂಟಾಗಿ ಆತನು ನನಗೆ ಹೇಳಿದ್ದೇನಂದರೆ
5 ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.
6 ಆಗ ನಾನು–ಹಾ! ಕರ್ತನಾದ ದೇವರೇ ಇಗೋ, ನಾನು ಮಾತನಾಡಲಾರೆನು, ನಾನು ಚಿಕ್ಕವನು ಅಂದೆನು.
7 ಆಗ ಕರ್ತನು ನನಗೆ–ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು.
8 ಅವರಿಗೆ ಭಯಪಡಬೇಡ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅಂದನು.
ಸೊಲೊಮೋನನು ದಾವೀದನಿಂದ ಸೂಚಿಸಿದನು
1 ಪೂರ್ವಕಾಲವೃತ್ತಾಂತ 28
11 ಆಗ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ — ದ್ವಾರಾಂಗಳದ ಮಾದರಿಯನ್ನೂ ಅದರ ಮನೆಗಳು, ಉಗ್ರಾಣಗಳು, ಮೇಲಿನ ಕೊಠಡಿ ಗಳು, ಅಂತರಂಗದ ಕೊಠಡಿಗಳು, ಕೃಪಾಸನದ ಸ್ಥಾನವು,
12 ಕರ್ತನ ಮನೆಯ ಅಂಗಳಗಳು, ಸುತ್ತಲಿ ರುವ ಕೊಠಡಿಗಳಾದ ಕರ್ತನ ಮನೆಯ ಉಗ್ರಾಣ ಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮ ದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿ ಯನ್ನೂ ಕೊಟ್ಟನು.
13 ಇದಲ್ಲದೆ ಯಾಜಕರ ಲೇವಿ ಯರ ವರ್ಗಗಳಿಗೋಸ್ಕರವೂ ಕರ್ತನ ಮನೆಯ ಸೇವೆಯ ಸಮಸ್ತ ಕೆಲಸಕ್ಕೋಸ್ಕರವೂ ಕರ್ತನ ಮನೆ ಯಲ್ಲಿರುವ ಸೇವೆಮಾಡುವ ಸಮಸ್ತ ಪಾತ್ರೆಗಳಿ ಗೋಸ್ಕರವೂ ಕಟ್ಟಳೆ ಕೊಟ್ಟನು.
14 ಸಕಲ ವಿಧವಾದ ಸೇವೆಗೆ ಸಮಸ್ತ ಬಂಗಾರದ ಸಾಮಾನುಗಳಿಗೋಸ್ಕರ ಬಂಗಾರವನ್ನೂ ಸಕಲವಿಧವಾದ ಸೇವೆಗೆ ಸಮಸ್ತ ಬೆಳ್ಳಿಯ ಸಾಮಾನುಗಳಿಗೋಸ್ಕರ ಬೆಳ್ಳಿಯನ್ನೂ ತೂಗಿ ಕೊಟ್ಟನು.
15 ಬಂಗಾರದ ದೀಪಸ್ತಂಭಗಳಿಗೋಸ್ಕ ರವೂ ಅದರ ಬಂಗಾರದ ದೀಪಗಳಿಗೋಸ್ಕರವೂ ಒಂದೊಂದು ಸ್ತಂಭಕ್ಕೋಸ್ಕರ ತೂಕಮಾಡಿ ಕೊಟ್ಟನು. ಹಾಗೆಯೇ ಬೆಳ್ಳಿಯ ದೀಪಸ್ತಂಭಗಳಿಗೋಸ್ಕರ ದೀಪ ಸ್ತಂಭಕ್ಕೂ ಅದರ ದೀಪಗಳಿಗೂ ಒಂದೊಂದು ದೀಪ ಸ್ತಂಭದ ಕೆಲಸದ ಪ್ರಕಾರ ತೂಕಮಾಡಿ ಕೊಟ್ಟನು.
16 ಆ ಪ್ರಕಾರವೇ ಸಮ್ಮುಖದ ರೊಟ್ಟಿಗಳ ಮೇಜುಗಳಿ ಗೋಸ್ಕರ ಒಂದೊಂದು ಮೇಜಿಗೆ ತೂಗಿಕೊಟ್ಟನು; ಬೆಳ್ಳಿಯ ಮೇಜುಗಳಿಗೋಸ್ಕರ ಹಾಗೆಯೇ ಬೆಳ್ಳಿಯನ್ನು ತೂಗಿಕೊಟ್ಟನು.
17 ಅದೇ ಪ್ರಕಾರ ಮುಳ್ಳುಗಳೂ ಪಾತ್ರೆಗಳೂ ಹೂಜೆಗಳೂ ಇವುಗಳಿಗೋಸ್ಕರ ಚೊಕ್ಕ ಬಂಗಾರವನ್ನು ಕೊಟ್ಟನು. ಬಂಗಾರದ ಬಟ್ಟಲುಗಳಿ ಗೋಸ್ಕರ ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ ಬೆಳ್ಳಿಯ ಒಂದೊಂದು ಬಟ್ಟಲಿಗೋ ಸ್ಕರ ಅದರ ತೂಕವಾಗಿಯೂ ಕೊಟ್ಟನು.
18 ಇದಲ್ಲದೆ ಧೂಪಪೀಠಕ್ಕೋಸ್ಕರ ಬಂಗಾರವನ್ನೂ ರೆಕ್ಕೆಗಳನ್ನೂ ಚಾಚಿಕೊಂಡು ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಮುಚ್ಚುವ ಕೆರೂಬಿಗಳ ರಥದ ಮಾದರಿಗೋಸ್ಕರ ಬಂಗಾರವನ್ನೂ ತೂಗಿಕೊಟ್ಟನು.
19 ಕರ್ತನು ತನ್ನ ಕೈ ನನ್ನ ಮೇಲೆ ಇರಿಸಿ ಈ ಮಾದರಿಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದನು ಅಂದನು.
20 ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ–ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.
21 ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
ಯೆಹೋಷಾಫಾಟನಿಗೆ ಯುದ್ಧ ನಿರ್ದೇಶನ
2 ಪೂರ್ವಕಾಲವೃತ್ತಾಂತ 20
10 ಈಗ ಇಗೋ, ಅಮ್ಮೋನ್ ಮೋವಾಬ್, ಸೇಯಾರ್ ಬೆಟ್ಟದ ಮಕ್ಕಳನ್ನು ನೋಡು; ಇಸ್ರಾಯೇಲ್ಯರು ಐಗುಪ್ತದೇಶ ದೊಳಗಿಂದ ಹೊರಟು ಬರುವಾಗ ಅವರ ಕಡೆಗೆ ಹೋಗಲು ನೀನು ಇವರಿಗೆ ಅಪ್ಪಣೆಕೊಡದೆ ಇದ್ದದ ರಿಂದ ಇವರು ತೊಲಗಿ ಅವರನ್ನು ನಾಶಮಾಡದೆ ಹೋದರು.
11 ಇಗೋ, ನಮಗೆ ನೀನು ಸ್ವಾಧೀನ ಮಾಡಿಕೊಳ್ಳಲು ಕೊಟ್ಟ ನಿನ್ನ ಸ್ವಾಸ್ಥ್ಯದೊಳಗಿಂದ ಅವರು ಬಂದು ನಮ್ಮನ್ನು ಹೊರಡಿಸಬೇಕೆಂದು ನಮಗೆ ಪ್ರತೀಕಾರ ಮಾಡುತ್ತಾರೆ.
12 ಓ ನಮ್ಮ ದೇವರೇ, ನೀನು ಅವರಿಗೆ ನ್ಯಾಯತೀರಿಸುವದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾಗುಂಪನ್ನು ಎದು ರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯಲಿಲ್ಲ. ಆದರೆ ನಮ್ಮ ಕಣ್ಣುಗಳು ನಿನ್ನ ಮೇಲೆ ಅವೆ ಅಂದರು.
13 ಹೀಗೆಯೇ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಕರ್ತನ ಮುಂದೆ ನಿಂತರು.
14 ಆಗ ಸಭೆಯ ಮಧ್ಯದಲ್ಲಿ ಆಸಾಫನ ಮಕ್ಕಳಲ್ಲಿ ಒಬ್ಬನಾದಂಥ, ಲೇವಿಯನಾದಂಥ, ಮತ್ತನ್ಯನ ಮಗ ನಾದ ಯೆಗೀಯೇಲನ ಮಗನಾದ ಬೆನಾಯನ ಮಗ ನಾದ ಜೆಕರೀಯನ ಮಗನಾದ ಯಹಜೀಯೇಲನ ಮೇಲೆ ಕರ್ತನ ಆತ್ಮನು ಬಂದನು.
15 ಆಗ ಅವನುಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿ ಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಕರ್ತನು ನಿಮಗೆ ಹೀಗೆ ಹೇಳುತ್ತಾನೆ–ಈ ಮಹಾಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರ ಬೇಡಿರಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ದೇವ ರದೇ.
16 ಮಾರನೇ ದಿವಸ ನೀವು ಅವರಿಗೆ ಎದು ರಾಗಿ ಹೋಗಿರಿ. ಇಗೋ, ಅವರು ಹಚ್ಚೀಚು ಎಂಬ ಕಣಿವೆಯಿಂದ ಬರುತ್ತಾರೆ; ಯೆರೂವೇಲಿನ ಅರಣ್ಯದ ಮುಂಭಾಗದಲ್ಲಿರುವ ಹಳ್ಳದ ಅಂತ್ಯದಲ್ಲಿ ಅವರನ್ನು ಕಂಡುಕೊಳ್ಳುವಿರಿ.
17 ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು.
ನೆಹೆಮಿಯ ಮತ್ತು ಗೋಡೆ
ನೆಹೆಮಿಯ 4
7 ಯೆರೂಸಲೇಮಿನ ಗೋಡೆಗಳು ಕಟ್ಟಲ್ಪ ಟ್ಟವೆಂದೂ ಅದರ ಸಂದುಗಳು ಮುಚ್ಚಲ್ಪಟ್ಟವೆಂದೂ ಸನ್ಬಲ್ಲಟನು ಟೋಬೀಯನೂ ಅರಬಿಯರೂ ಅಮ್ಮೋ ನ್ಯರೂ ಅಷ್ಡೋದ್ಯರೂ ಕೇಳಿದಾಗ ಏನಾಯಿತಂದರೆ
8 ಅವರೆಲ್ಲಾ ಬಹುಕೋಪಗೊಂಡು ಯೆರೂಸಲೇಮಿಗೆ ವಿರೋಧವಾಗಿ ಯುದ್ಧಮಾಡುವದಕ್ಕೂ ಅಭ್ಯಂತರಿಸು ವದಕ್ಕೂ ಬರಲು ಏಕವಾಗಿ ಒಳಸಂಚು ಮಾಡಿದರು.
9 ಆದರೆ ನಾವು ನಮ್ಮ ದೇವರಿಗೆ ಪ್ರಾರ್ಥನೆ ಮಾಡಿ ಅವರ ನಿಮಿತ್ತ ಅವರಿಗೆ ಎದುರಾಗಿ ರಾತ್ರಿ ಹಗಲು ಕಾವಲನ್ನು ಇಟ್ಟೆವು.
10 ಆಗ ಯೆಹೂದದವರು–ಹೊರೆ ಹೊರುವವರ ಬಲವು ಕಡಿಮೆಯಾಗಿ ಮಣ್ಣು ಬಹಳವಾಗಿದೆ; ಗೋಡೆಯನ್ನು ನಾವು ಕಟ್ಟಲಾರೆವು ಅಂದರು.
11 ನಮ್ಮ ವೈರಿಗಳು–ಅವರು ತಿಳಿಯದ ಹಾಗೆಯೂ ನೋಡದ ಹಾಗೆಯೂ ನಾವು ಅವರ ನಡುವೆ ಬಂದು ಅವರನ್ನು ಕೊಂದುಹಾಕಿ ಕೆಲಸವನ್ನು ನಿಲ್ಲಿಸಿ ಬಿಡುವೆವು ಅಂದರು.
12 ಅವರ ಬಳಿಯಲ್ಲಿ ವಾಸವಾಗಿರುವ ಯೆಹೂದ್ಯರು ನಮ್ಮ ಬಳಿಗೆ ಬಂದಾಗನೀವು ತಿರುಗುವ ಎಲ್ಲಾ ಸ್ಥಳಗಳಿಂದ ನಮ್ಮ ಮೇಲೆ ಬಂದಾರು ಎಂದು ನಮಗೆ ಹತ್ತುಸಾರಿ ಹೇಳಿದರು.
13 ಆದಕಾರಣ ನಾನು ಗೋಡೆಗೆ ಹಿಂದಾಗಿರುವ ತಗ್ಗಿನ ಸ್ಥಳಗಳಲ್ಲಿಯೂ ಎತ್ತರವಾದ ಸ್ಥಳಗಳಲ್ಲಿಯೂ ಜನರನ್ನು ನಿಲ್ಲಿಸಿದೆನು; ತಮ್ಮ ಕತ್ತಿಗಳನ್ನೂ ಈಟಿಗ ಳನ್ನೂ ಬಿಲ್ಲುಗಳನ್ನೂ ಹಿಡುಕೊಂಡಿರುವ ಜನವನ್ನು ಅವರವರ ವಂಶಗಳ ಪ್ರಕಾರ ನಿಲ್ಲಿಸಿದೆನು.
14 ನಾನು ನೋಡಿದ ತರುವಾಯ ಎದ್ದು ಶ್ರೇಷ್ಠರಿಗೂ ಅಧಿಕಾರ ಸ್ಥರಿಗೂ ಇತರ ಜನರಿಗೂ–ನೀವು ಅವರಿಗೋಸ್ಕರ ಭಯಪಡಬೇಡಿರಿ; ದೊಡ್ಡವನಾಗಿಯೂ ಭಯಂಕರ ನಾಗಿಯೂ ಇರುವ ಕರ್ತನನ್ನು ಜ್ಞಾಪಕಮಾಡಿ ಕೊಂಡು ನಿಮ್ಮ ಸಹೋದರರಿಗೋಸ್ಕರ, ಕುಮಾರ, ಕುಮಾರ್ತೆಯರಿಗೋಸ್ಕರ, ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ ಅಂದೆನು.
15 ಆ ವರ್ತಮಾನ ನಮಗೆ ತಿಳಿಯಿತೆಂದೂ ದೇವರು ತಮ್ಮ ಆಲೋಚನೆಯನ್ನು ವ್ಯರ್ಥಮಾಡಿದನೆಂದೂ ನಮ್ಮ ಶತ್ರುಗಳು ಕೇಳಿದಾಗ ನಾವೆಲ್ಲರೂ ಗೋಡೆಗೆ ತಿರುಗಿ ಬಂದೆವು; ಪ್ರತಿ ಮನುಷ್ಯನು ತನ್ನ ಕೆಲಸಕ್ಕೆ ಸೇರಿದನು.
ವಿಮೋಚನಕಾಂಡ ಸಮಯದಲ್ಲಿ ಸೂಚನೆ
ಧರ್ಮೋಪದೇಶಕಾಂಡ 1
26 ಆದರೆ ನೀವು ಮೇಲೆ ಹೋಗುವದಕ್ಕೆ ಮನಸ್ಸಿಲ್ಲದೆ ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ತಿರುಗಿಬಿದ್ದು
27 ನಿಮ್ಮ ಗುಡಾರಗಳಲ್ಲಿ ಗುಣುಗುಟ್ಟಿ–ಕರ್ತನು ನಮ್ಮನ್ನು ಹಗೆಮಾಡಿದ್ದರಿಂದ ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ ನಾಶಮಾಡುವದಕ್ಕೆ ಐಗುಪ್ತದೇಶದೊಳ ಗಿಂದ ಹೊರಗೆ ಬರಮಾಡಿದ್ದಾನೆ.
28 ನಾವು ಎಲ್ಲಿಗೆ ಹೋಗೋಣ? ನಮ್ಮ ಸಹೋದರರು–ಆ ಜನರು ನಮಗಿಂತ ದೊಡ್ಡವರೂ ಉದ್ದವಾದವರೂ; ಪಟ್ಟಣ ಗಳು ದೊಡ್ಡವುಗಳೂ ಆಕಾಶದ ಎತ್ತರಕ್ಕೂ ಗೋಡೆ ಯುಳ್ಳವುಗಳೂ; ಇದಲ್ಲದೆ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ ಎಂದು ಹೇಳಿದಿರಿ.
29 ಆಗ ನಾನು ನಿಮಗೆ–ಅಂಜಬೇಡಿರಿ; ಅವರಿಗೆ ಭಯಪಡಬೇಡಿರಿ.
30 ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಕರ್ತನು, ಆತನೇ ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆಯೂ ಅರಣ್ಯದಲ್ಲಿಯೂ ನಿಮಗೆ ಮಾಡಿದ ಎಲ್ಲಾದರ ಪ್ರಕಾರ ನಿಮಗೋಸ್ಕರ ಯುದ್ಧಮಾಡುವನು.
31 ಈ ಅರಣ್ಯದಲ್ಲಿ ನಿಮ್ಮ ದೇವ ರಾದ ಕರ್ತನು, ನಿಮ್ಮನ್ನು ತಂದೆ ಮಗನನ್ನು ಹೊತ್ತು ಕೊಳ್ಳುವ ಪ್ರಕಾರ ನೀವು ಹೋದ ಮಾರ್ಗದಲ್ಲೆಲ್ಲಾ ಈ ಸ್ಥಳಕ್ಕೆ ಬರುವ ಪರ್ಯಂತರ ಹೊತ್ತುಕೊಂಡನೆಂದು ನೋಡಿದ್ದೀರಲ್ಲಾ ಅಂದೆನು.
32 ಆದರೆ ಈ ಕಾರ್ಯದಲ್ಲಿ ನೀವು ನಿಮ್ಮ ದೇವರಾದ ಕರ್ತನನ್ನು ನಂಬಲಿಲ್ಲ.
33 ಇಳುಕೊಳ್ಳುವದಕ್ಕೆ ನಿಮಗೆ ಸ್ಥಳವನ್ನು ವಿಚಾರಿಸಲೂ ನೀವು ಹೋಗತಕ್ಕ ಮಾರ್ಗ ವನ್ನು ನಿಮಗೆ ತೋರಿಸಲೂ ರಾತ್ರಿಹೊತ್ತು ಬೆಂಕಿ ಯಲ್ಲಿಯೂ ಹಗಲುಹೊತ್ತು ಮೇಘದಲ್ಲಿಯೂ ಮಾರ್ಗದಲ್ಲಿ ಆತನೇ ನಿಮ್ಮ ಮುಂದೆ ಹೋದನು.
ಮೋಶೆಯನ್ನು ಯಶಸ್ವಿಯಾಗುತ್ತಿದ್ದಂತೆ ಯೆಹೋಶುವನಿಗೆ ಸೂಚನೆ
ಧರ್ಮೋಪದೇಶಕಾಂಡ 31
1 ಆಗ ಮೋಶೆ ಹೋಗಿ ಇಸ್ರಾಯೇಲ್ಯರಿಗೆಲ್ಲಾ ಈ ಮಾತುಗಳನ್ನು ಹೇಳಿದನು.
2 ಅವನು ಅವರಿಗೆ–ನಾನು ಈಹೊತ್ತು ನೂರ ಇಪ್ಪತ್ತು ವರುಷದವನಾಗಿದ್ದೇನೆ; ನಾನು ಇನ್ನು ಹೊರಗೆ ಹೋಗುವದಕ್ಕೂ ಬರುವದಕ್ಕೂ ಶಕ್ತನಲ್ಲ; ಇದಲ್ಲದೆ ಕರ್ತನು ನನಗೆ–ನೀನು ಈ ಯೊರ್ದನನ್ನು ದಾಟುವದಿ ಲ್ಲವೆಂದು ಹೇಳಿದ್ದಾನೆ.
3 ನಿನ್ನ ದೇವರಾದ ಕರ್ತನು ತಾನೇ ನಿನ್ನ ಮುಂದೆ ಹೋಗುವನು. ಆತನು ಆ ಜನಾಂಗಗಳನ್ನು ನಿನ್ನ ಮುಂದೆ ನಾಶಮಾಡುವನು; ನೀನು ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವಿ; ಕರ್ತನು ಹೇಳಿದ ಪ್ರಕಾರ ಯೆಹೋಶುವನು ನಿನ್ನ ಮುಂದೆ ಹೋಗುವನು.
4 ಕರ್ತನು ಅಮೋರಿಯರ ಅರಸನಾದ ಸೀಹೋನನಿಗೂ ಓಗನಿಗೂ ಆತನು ನಾಶಮಾಡಿದ ಅವರ ದೇಶಕ್ಕೂ ಮಾಡಿದಂತೆ ಆ ಜನಾಂಗಗಳಿಗೆ ಮಾಡುವನು.
5 ನಾನು ನಿಮಗೆ ಆಜ್ಞಾಪಿಸಿದ ಸಮಸ್ತ ಆಜ್ಞೆಯ ಪ್ರಕಾರ ನೀವು ಅವರಿಗೆ ಮಾಡುವಹಾಗೆ ಕರ್ತನು ಅವರನ್ನು ನಿಮ್ಮ ಮುಂದೆ ಒಪ್ಪಿಸಿಬಿಡುವನು.
6 ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.
7 ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ–ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು.
8 ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
ಯೆಹೋಶುವ 1
1 ಕರ್ತನ ಸೇವಕನಾದ ಮೋಶೆ ಸತ್ತ ತರುವಾಯ ಕರ್ತನು ಮೋಶೆಯ ಸೇವಕನಾದ ನೂನನ ಮಗನಾಗಿರುವ ಯೆಹೋಶುವನಿಗೆ–
2 ನನ್ನ ಸೇವಕನಾದ ಮೋಶೆಯು ಸತ್ತನು; ಈಗ ನೀನು ಈ ಜನರೆಲ್ಲರ ಸಹಿತವಾಗಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶಕ್ಕೆ ಹೋಗು.
3 ನಾನು ಮೋಶೆಗೆ ಹೇಳಿದ ಹಾಗೆ ನಿಮ್ಮ ಪಾದವು ತುಳಿಯುವ ಎಲ್ಲಾ ಸ್ಥಳವನ್ನು ನಿಮಗೆ ಕೊಟ್ಟೆನು.
4 ಅರಣ್ಯವೂ ಈ ಲೆಬನೋನೂ ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯ ವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ಸೂರ್ಯನು ಅಸ್ತಮಿಸುವ ಕಡೆಗೆ ಮಹಾಸಮುದ್ರದ ವರೆಗೂ ನಿಮ್ಮ ಮೇರೆಯಾಗಿರುವದು.
5 ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
6 ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ.
7 ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ.
8 ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.
9 ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
ಯೇಸುವಿನ ಜನನ ಘೋಷನೆ
ಲೂಕನು 2
8. ಆಗ ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು.
9. ಇಗೋ, ಕರ್ತನ ದೂತನು ಅವರ ಬಳಿಗೆ ಬಂದನು. ಆಗ ಕರ್ತನ ಮಹಿಮೆಯು ಅವರ ಸುತ್ತಮುತ್ತಲೂ ಪ್ರಕಾಶಿ ಸಿತು; ಆದದರಿಂದ ಅವರು ಬಹಳವಾಗಿ ಹೆದರಿದರು.
10. ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
11. ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
12. ಆ ಶಿಶುವು ಬಟ್ಟೆಯಿಂದ ಸುತ್ತಲ್ಪಟ್ಟು ಗೋದಲಿಯಲ್ಲಿ ಮಲಗಿರುವದನ್ನು ನೀವು ಕಾಣುವಿರಿ; ಇದೇ ನಿಮಗೆ ಗುರುತು ಎಂದು ಹೇಳಿದನು.
ಯೋಸೇಫನಿಗೆ ಯೇಸುವಿನ ಬಗ್ಗೆ ಸೂಚನೆ
ಮತ್ತಾಯನು 1
18. ಯೇಸು ಕ್ರಿಸ್ತನ ಜನನವು ಹೀಗಾಯಿತು: ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದಾಗ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಗರ್ಭಿಣಿಯಾದದ್ದು ಕಂಡು ಬಂತು.
19. ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ ರಹಸ್ಯವಾಗಿ ಆಕೆಯನ್ನು ಬಿಟ್ಟುಬಿಡಬೇಕೆಂದು ಆಲೋಚಿಸುತ್ತಿದ್ದನು.
20. ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು– ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.
21. ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
22. ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು.
ಜಕರಿಯನಿಗೆ ಸಲಹೆ ನೀಡಲಾಯಿತು
ಲೂಕನು 1
8. ಹೀಗಿರಲಾಗಿ ಅವನು ತನ್ನ ವರ್ಗದ ಸರತಿಯ ಮೇರೆಗೆ ದೇವರ ಮುಂದೆ ಯಾಜಕನ ಉದ್ಯೋಗವನ್ನು ಮಾಡುತ್ತಿದ್ದಾಗ
9. ಯಾಜಕೋದ್ಯೋಗದ ಪದ್ಧತಿಯ ಪ್ರಕಾರ ಅವನು ಕರ್ತನ ಆಲಯದಲ್ಲಿ ಪ್ರವೇಶಿಸಿ ಧೂಪವನ್ನು ಸುಡುವದು ಅವನ ಪಾಲಿಗೆ ಬಂತು.
10. ಧೂಪಾರ್ಪಣೆಯ ಸಮಯದಲ್ಲಿ ಜನ ಸಮೂಹ ವೆಲ್ಲಾ ಹೊರಗೆ ಪ್ರಾರ್ಥಿಸುತ್ತಿದ್ದರು.
11. ಆಗ ಧೂಪ ವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
12. ಜಕರೀ ಯನು ಅವನನ್ನು ನೋಡಿ ಕಳವಳದಿಂದ ಭಯಹಿಡಿ ದವನಾದನು.
13. ಆದರೆ ಆ ದೂತನು ಅವನಿಗೆ–ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
14. ನಿನಗೆ ಆನಂದವೂ ಉಲ್ಲಾಸವೂ ಆಗುವದು; ಅನೇಕರು ಅವನ ಜನನದಲ್ಲಿ ಆನಂದಿಸುವರು.
15. ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
16. ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು.
17. ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
ಪೌಲನು ತನ್ನ ಸೇವೆಯ ಸಮಯದಲ್ಲಿ ಹೀಗೆ ಹೇಳಿದನು:
ಅಪೊಸ್ತಲರ ಕೃತ್ಯಗಳು 18
7. ಆ ಸ್ಥಳದಿಂದ ಹೊರಟು ದೇವರನ್ನು ಆರಾಧಿಸುವವನಾಗಿದ್ದ ಯುಸ್ತನೆಂಬವನ ಮನೆಗೆ ಹೋದನು. ಅವನ ಮನೆ ಸಭಾಮಂದಿರದ ಮಗ್ಗುಲಲ್ಲೇ ಇತ್ತು.
8. ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು.
9. ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು–ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು.
10. ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.
11. ಅವನು ಒಂದು ವರುಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಅವರಲ್ಲಿ ದೇವರ ವಾಕ್ಯವನ್ನು ಉಪದೇಶ ಮಾಡುತ್ತಿದ್ದನು.