ನಮ್ಮ ಶತ್ರುವನ್ನು ಅರಿತುಕೊಳ್ಳುವುದು
ಸೈತಾನನ ಶಕ್ತಿಗಳ ಮೇಲೆ ದೇವರ ಮಕ್ಕಳ ಅಧಿಕಾರ
ಎಫೆಸದವರಿಗೆ 6
10 ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
11 ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ.
12 ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ.
13 ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ.
2 ಕೊರಿಂಥದವರಿಗೆ 10
3 ನಾವು ಶರೀರದಲ್ಲಿ ನಡ ಕೊಳ್ಳುವವರಾದರೂ ಶರೀರ ಪ್ರಕಾರವಾಗಿ ಯುದ್ಧ ಮಾಡುವವರಲ್ಲ.
4 (ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
5 ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
1 ಪೇತ್ರನು 5
8 ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
9 ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ.
ಯಾಕೋಬನು 4
7 ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.
8 ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.
9 ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ.
10 ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.
ರೋಮಾಪುರದವರಿಗೆ 8
37 ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
38 ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿ
39 ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
ಸೈತಾನನ ರಾಜ್ಯದಿಂದ ವಿಮೋಚನೆ
ಕೊಲೊಸ್ಸೆಯವರಿಗೆ 1
9 ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು
10 ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ
11 ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ
12 ಬೆಳಕಿ ನಲ್ಲಿರುವ ಪರಿಶುದ್ದರ ಬಾಧ್ಯತೆಯಲ್ಲಿ ಪಾಲುಗಾರ ರಾಗುವದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ನಾನು ಆಶಿಸುತ್ತೇನೆ.
13 ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.
14 ಆತನಲ್ಲಿ (ಆ ಕುಮಾರನಲ್ಲಿ) ಆತನ ರಕ್ತದ ಮೂಲಕ ನಮಗೆ ವಿಮೋಚನೆಯು ಅಂದರೆ ಪಾಪಪರಿಹಾರವು ಉಂಟಾಯಿತು.
15 ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಪ್ರತಿಯೊಂದು ಸೃಷ್ಟಿಗೆ ಜ್ಯೇಷ್ಠನೂ ಆಗಿದ್ದಾನೆ.
16 ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು.
17 ಆತನು ಎಲ್ಲದಕ್ಕೂ ಮೊದಲು ಇದ್ದಾತನು; ಆತನು ಸಮಸ್ತಕ್ಕೂ ಆಧಾರನಾಗಿದ್ದಾನೆ.
18 ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.
19 ಆತನಲ್ಲಿ ಸರ್ವ ಸಂಪೂರ್ಣತೆಯು ವಾಸವಾಗಿರುವದು ತಂದೆಗೆ ಇಷ್ಟ ವಾಗಿತ್ತು.
20 ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು.
21 ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳಿಂದ ದ್ವೇಷ ಮನಸ್ಸುಳ್ಳವರೂ ಆಗಿದ್ದಿರಿ. ಆದಾಗ್ಯೂ ಈಗ ಆತನು ನಿಮ್ಮನ್ನು ಸಂಧಾನಪಡಿಸಿ ಕೊಂಡಿದ್ದಾನೆ.
22 ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ.
23 ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
ದೆವ್ವ – ಕಳ್ಳ
ಯೋಹಾನನು 10
7 ಯೇಸು ತಿರಿಗಿ ಅವರಿಗೆ–ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗ ಲಾಗಿದ್ದೇನೆ.
8 ನನಗಿಂತ ಮುಂಚೆ ಬಂದವರೆಲ್ಲರು ಕಳ್ಳರೂ ಸುಲುಕೊಳ್ಳುವವರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.
9 ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.
10 ಕಳ್ಳನು ಕದ್ದುಕೊಳ್ಳುವದಕ್ಕೂ ಕೊಲ್ಲುವದಕ್ಕೂ ಹಾಳುಮಾಡು ವದಕ್ಕೂ ಮಾತ್ರ ಬರುತ್ತಾನೇ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಸಮೃದ್ಧಿಯು ಇರಬೇಕೆಂತಲೂ ಬಂದೆನು.
ಇಸ್ರಾಯೇಲ ಇತಿಹಾಸದಿಂದ ಎಚ್ಚರಿಕೆಗಳು: ವಿಗ್ರಹಾರಾಧನೆ
ಕೀರ್ತನೆಗಳು 106
1 ನೀವು ಕರ್ತನನ್ನು ಸ್ತುತಿಸಿರಿ, ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನು ಒಳ್ಳೆಯವನು, ಆತನ ಕರುಣೆಯು ಶಾಶ್ವತ ವಾಗಿರುವದು.
2 ಕರ್ತನ ಪರಾಕ್ರಮ ಕ್ರಿಯೆಗಳನ್ನು ಪ್ರಕಟಿಸುವವನಾರು? ಆತನ ಸ್ತೋತ್ರಗಳನ್ನು ಪ್ರಸಿದ್ಧಿ ಪಡಿಸುವವನಾರು?
3 ನ್ಯಾಯವನ್ನು ಕೈಕೊಂಡು ಎಲ್ಲಾ ಕಾಲದಲ್ಲಿ ನೀತಿಯನ್ನು ಮಾಡುವವರು ಧನ್ಯರು.
4 ಓ ಕರ್ತನೇ, ನಿನ್ನ ಜನರ ಮೇಲಿರುವ ಕಟಾಕ್ಷದಿಂದ ನನ್ನನ್ನೂ ಜ್ಞಾಪಿಸಿಕೋ; ನಿನ್ನ ರಕ್ಷಣೆಯಿಂದ ನನ್ನನ್ನು ದರ್ಶಿಸು.
5 ಕರ್ತನೇ, ನೀನು ಆದುಕೊಂಡವರ ಸುಖವನ್ನು ನಾನು ನೋಡಿ ನಿನ್ನ ಜನಾಂಗದ ಸಂತೋಷ ದೊಂದಿಗೆ ಸಂತೋಷಿಸಿ ನಿನ್ನ ಬಾಧ್ಯತೆಯ ಸಂಗಡ ಹೊಗಳಿಕೊಳ್ಳುವೆನು.
6 ನಮ್ಮ ತಂದೆಗಳ ಸಂಗಡ ನಾವು ಪಾಪಮಾಡಿದ್ದೇವೆ, ಅಕ್ರಮಮಾಡಿದ್ದೇವೆ, ದುಷ್ಟತ್ವವನ್ನು ನಡಿಸಿದ್ದೇವೆ.
7 ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು.
8 ಆದಾಗ್ಯೂ ಆತನು ತನ್ನ ಮಹಾಶಕ್ತಿಯನ್ನು ಅವರಿಗೆ ತಿಳಿಯ ಮಾಡುವ ಹಾಗೆ ತನ್ನ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದನು.
9 ಆತನು ಕೆಂಪು ಸಮುದ್ರವನ್ನು ಗದರಿಸಲು ಅದು ಒಣಗಿ ಹೋಯಿತು. ಹೀಗೆ ಜಲಾಗಾಧದಲ್ಲಿ, ಅರಣ್ಯ ದಲ್ಲಿದ್ದ ಹಾಗೆಯೇ ಆತನು ಅವರನ್ನು ನಡಿಸಿದನು.
10 ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿ, ಶತ್ರು ವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದನು.
11 ನೀರುಗಳು ಅವರ ವೈರಿಗಳನ್ನು ಮುಚ್ಚಿಬಿಟ್ಟವು; ಅವರಲ್ಲಿ ಒಬ್ಬನಾದರೂ ಉಳಿಯಲಿಲ್ಲ.
12 ಆಗ ಅವರು ಆತನ ಮಾತುಗಳನ್ನು ನಂಬಿ ಆತನ ಸ್ತೋತ್ರ ವನ್ನು ಹಾಡಿದರು.
13 ಆತನ ಕೆಲಸಗಳನ್ನು ಬೇಗ ಮರೆತುಬಿಟ್ಟು ಆತನ ಆಲೋಚನೆಗೆ ಅವರು ಕಾದುಕೊಳ್ಳದೆ ಇದ್ದರು.
14 ಅರಣ್ಯದಲ್ಲಿ ದುರಾಶೆಯಿಂದ ಆಶಿಸಿ ಮರುಭೂಮಿ ಯಲ್ಲಿ ದೇವರನ್ನು ಪರೀಕ್ಷಿಸಿದರು.
15 ಆಗ ಅವರ ಬೇಡಿಕೆಯಂತೆ ಅವರಿಗೆ ಆತನು ಕೊಟ್ಟನು; ಆದರೆ ಅವರ ಪ್ರಾಣದಲ್ಲಿ ಕ್ಷೀಣತೆಯನ್ನು ಕಳುಹಿಸಿದನು.
16 ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ ಕರ್ತನ ಪರಿಶುದ್ದನಾದ ಆರೋನನ ಮೇಲೆಯೂ ಹೊಟ್ಟೇಕಿಚ್ಚು ಪಟ್ಟರು.
17 ಭೂಮಿಯು ಬಾಯಿತೆರೆದು ದಾತಾನನನ್ನು ನುಂಗಿ ಅಬಿರಾಮನ ಗುಂಪನ್ನು ಮುಚ್ಚಿ ಬಿಟ್ಟಿತು.
18 ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು.
19 ಅವರು ಹೋರೇಬಿ ನಲ್ಲಿ ಕರುವನ್ನು ಮಾಡಿ ಎರಕದ ವಿಗ್ರಹಕ್ಕೆ ಅಡ್ಡ ಬಿದ್ದರು.
20 ತಮ್ಮ ಘನವನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು.
21 ತಮ್ಮ ರಕ್ಷಕನಾಗಿ ಐಗುಪ್ತದೇಶದಲ್ಲಿ ದೊಡ್ಡ ಕೆಲಸಗಳನ್ನೂ
22 ಹಾಮನ ದೇಶದಲ್ಲಿ ಅದ್ಭುತಗಳನ್ನೂ ಕೆಂಪು ಸಮುದ್ರದ ಬಳಿ ಯಲ್ಲಿ ಭಯಂಕರವಾದವುಗಳನ್ನೂ ಮಾಡಿದ ದೇವ ರನ್ನು ಅವರು ಮರೆತರು.
23 ಆದದರಿಂದ ಆತನು ಅವರನ್ನು ನಾಶಮಾಡುತ್ತೇನೆಂದು ಹೇಳಿದನು. ಆದರೆ ಆತನು ಆದುಕೊಂಡ ಮೋಶೆಯು ಆತನ ಕೋಪ ವನ್ನು ತಿರುಗಿಸುವ ಹಾಗೆ ಆಪತ್ತಿನಲ್ಲಿ ಆತನ ಮುಂದೆ ನಿಂತುಕೊಂಡನು.
24 ಹೌದು, ಅವರು, ಮನೋಹರವಾದ ದೇಶ ವನ್ನು ಅಸಹ್ಯಿಸಿಬಿಟ್ಟು ಆತನ ಮಾತನ್ನು ನಂಬದೆ ಹೋದರು.
25 ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ಕರ್ತನ ಸ್ವರವನ್ನು ಕೇಳದೆ ಹೋದರು.
26 ಆದದರಿಂದ ಅವರನ್ನು ಅರಣ್ಯದಲ್ಲಿ ಕೆಡವುವದಕ್ಕೂ
27 ಅವರ ಸಂತತಿಯನ್ನು ಜನಾಂಗಗಳಲ್ಲಿ ಕೆಡವಿ, ಅವರನ್ನು ದೇಶಗಳಲ್ಲಿ ಚದರಿಸುವದಕ್ಕೂ ಆತನು ತನ್ನ ಕೈಯನ್ನು ಅವರ ಮೇಲೆತ್ತಿದನು.
28 ಬಾಳ್ಪೆಗೊ ಯೋರಿಗೆ ಕೂಡಿಕೊಂಡು ಸತ್ತವರಿಗೆ ಅರ್ಪಿಸಿದ ಬಲಿಗಳನ್ನು ತಿಂದು
29 ತಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನು ಎಬ್ಬಿಸಿದರು; ಆದದರಿಂದ ವ್ಯಾಧಿಯು ಅವರಲ್ಲಿ ಹೊಕ್ಕಿತು.
30 ಆಗ ಫೀನೆಹಾಸನು ನಿಂತು ಕೊಂಡು ನ್ಯಾಯತೀರಿಸಿದ್ದರಿಂದ ವ್ಯಾಧಿಯು ನಿಂತು ಹೋಯಿತು.
31 ಇದು ತಲತಲಾಂತರಕ್ಕೂ ಯುಗ ಯುಗಕ್ಕೂ ಆತನಿಗೆ ನೀತಿಯೆಂದು ಎಣಿಸಲ್ಪಟ್ಟಿತು.
32 ಅವರು ವಿವಾದದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು; ಅವರ ನಿಮಿತ್ತ ಮೋಶೆಗೆ ಕೇಡು ಬಂತು.
33 ಅವರು ದೇವರಾತ್ಮನನ್ನು ಕೆಣ ಕಿದರು; ಆದದರಿಂದ ಅವನು ಬುದ್ಧಿಹೀನತೆಯಿಂದ ಮಾತನಾಡಿದನು.
34 ಕರ್ತನು ಅವರಿಗೆ ಹೇಳಿದ ಜನಗಳನ್ನು ಅವರು ನಾಶಮಾಡದೆ ಹೋದರು.
35 ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು.
36 ಅವರ ವಿಗ್ರಹಗಳಿಗೆ ಸೇವೆ ಮಾಡಿದರು ಅವು ಅವರಿಗೆ ನೇಣು ಆದವು.
37 ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು.
38 ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು.
39 ಹೀಗೆ ತಮ್ಮ ಕೆಲಸಗಳಿಂದ ತಮ್ಮನ್ನು ಹೊಲೆಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ಜಾರರಾದರು.
40 ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು
41 ಅವರನ್ನು ಅನ್ಯಜನಾಂಗಗಳ ಕೈಗೆಕೊಟ್ಟನು; ಅವರ ಹಗೆಯವರು ಅವರನ್ನು ಆಳಿದರು.
42 ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; ಅವರ ಕೈಕೆಳಗೆ ಅಧೀನರಾದರು.
43 ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು.
44 ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು
45 ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
46 ಅವರನ್ನು ಸೆರೆಹಿಡಿದವರ ಮುಂದೆ ಅವರು ಕರುಣೆ ಹೊಂದುವಂತೆ ಮಾಡಿದನು.
47 ಓ ನಮ್ಮ ದೇವರಾದ ಕರ್ತನೇ, ನಾವು ನಿನ್ನ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ ನಿನ್ನ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸು. ಅನ್ಯಜನಾಂಗಗಳೊಳಗಿಂದ ನಮ್ಮನ್ನು ಹೊರಗೆ ಬರಮಾಡು.
48 ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
ಧರ್ಮೋಪದೇಶಕಾಂಡ 32
15 ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
16 ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು.
17 ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು.
18 ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ.
19 ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು.
20 ಆತನು–ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ.
21 ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
1 ಕೊರಿಂಥದವರಿಗೆ 10
1 ಇದಲ್ಲದೆ ಸಹೋದರರೇ, ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ–ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು;
2 ಅವರೆಲ್ಲರೂ ಮೋಶೆ ಗಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಬಾಪ್ತಿಸ್ಮ ಹೊಂದಿದರು;
3 ಅವರೆಲ್ಲರೂ ಆತ್ಮಿಕವಾದ ಒಂದೇ ಆಹಾರವನ್ನು ತಿಂದರು;
4 ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ.
5 ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು.
6 ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ.
7 ಇಲ್ಲವೆ–ಜನರು ತಿನ್ನುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು; ಆಟವಾಡುವದಕ್ಕೆ ಎದ್ದರು ಎಂದು ಬರೆದಿರುವ ಪ್ರಕಾರ ನೀವೂ ಅವರಲ್ಲಿ ಕೆಲವರಂತೆ ವಿಗ್ರಹಾರಾಧಕರಾಗ ಬೇಡಿರಿ.
8 ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವ ಮಾಡದೆ ಇರೋಣ.
9 ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು.
10 ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶ ವಾದರು; ಆದದರಿಂದ ನೀವು ಗುಣುಗುಟ್ಟಬೇಡಿರಿ.
11 ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
12 ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.
13 ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
ವಿಗ್ರಹಾರಾಧನೆ ಮತ್ತು ಕರ್ತನ ಮೇಜು
1 ಕೊರಿಂಥದವರಿಗೆ 10
14 ಆದದರಿಂದ ನನ್ನ ಅತಿ ಪ್ರಿಯವಾದವರೇ, ವಿಗ್ರಹಾರಾಧನೆಯಿಂದ ಓಡಿಹೋಗಿರಿ.
15 ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ; ನಾನು ಹೇಳುವ ದನ್ನು ನೀವೇ ಯೋಚಿಸಿರಿ.
16 ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ?
17 ಅನೇಕರಾದ ನಾವು ಒಂದೇರೊಟ್ಟಿಯೂ ಒಂದೇದೇಹವೂ ಆಗಿದ್ದೇವೆ; ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲುಗಾರರಾಗಿದ್ದೇವೆ.
18 ಶರೀರದ ಪ್ರಕಾರ ಇಸ್ರಾಯೇಲ್ಯರನ್ನು ನೋಡಿರಿ; ಯಜ್ಞ ಮಾಡಿದವು ಗಳನ್ನು ತಿನ್ನುವವರು ಯಜ್ಞವೇದಿಯೊಂದಿಗೆ ಪಾಲು ಗಾರರಾಗಿದ್ದಾರಲ್ಲವೇ?
19 ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ?
20 ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.
21 ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ.
22 ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?
ನಂಬಿಕೆ ಮತ್ತು ಕಾರ್ಯಗಳು – ದೆವ್ವಗಳು ಸಹ ಯೇಸುವನ್ನು ನಂಬುತ್ತಾರೆ
ಯಾಕೋಬನು 2
14 ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ?
15 ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ
16 ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ–ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು?
17 ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ಒಂಟಿಯಾಗಿದ್ದು ಸತ್ತದ್ದಾಗಿದೆ.
18 ಹೌದು, ಒಬ್ಬ ಮನುಷ್ಯನು–ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು.
19 ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.
20 ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ?
21 ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?
22 ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ?
23 ಹೀಗೆ–ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು.
24 ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ.
25 ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ?
26 ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
ವಿಮೋಚನೆ ಮತ್ತು ಸ್ವಾತಂತ್ರ್ಯ
ಮತ್ತಾಯನು 12
43 ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ.
44 ಆಗ ಅದು–ನಾನು ಹೊರಟುಬಂದ ನನ್ನ ಮನೆಗೆ ಹಿಂತಿರುಗುವೆನು ಎಂದು ಅಂದುಕೊಂಡು ಬಂದು ಅದು ಬರಿದಾಗಿಯೂ ಗುಡಿಸಿ ಅಲಂಕರಿಸಲ್ಪಟ್ಟದ್ದಾ ಗಿಯೂ ಇರುವದನ್ನು ಕಂಡಿತು.
45 ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.
ಲೂಕನು 8
2 ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ
ಮತ್ತಾಯನು 10
1 ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು.
ಒಬ್ಬ ಹುಡುಗ ವಾಸಿಯಾದನು
ಮಾರ್ಕನು 9
14 ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರ ಸುತ್ತಲೂ ದೊಡ್ಡ ಸಮೂಹವನ್ನೂ ಶಾಸ್ತ್ರಿಗಳು ಅವರೊಂದಿಗೆ ತರ್ಕಿಸುತ್ತಿರುವದನ್ನೂ ಕಂಡನು.
15 ಕೂಡಲೆ ಜನರೆಲ್ಲರೂ ಆತನನ್ನು ನೋಡಿ ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಆತನನ್ನು ವಂದಿಸಿ ದರು.
16 ಆಗ ಆತನು ಶಾಸ್ತ್ರಿಗಳಿಗೆ– ಅವರೊಂದಿಗೆ ನೀವು ಏನು ತರ್ಕಮಾಡುತ್ತೀರಿ ಎಂದು ಕೇಳಿದನು.
17 ಆಗ ಸಮೂಹದಲ್ಲಿ ಒಬ್ಬನು ಪ್ರತ್ಯುತ್ತರವಾಗಿ–ಬೋಧಕನೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತಕ್ಕೊಂಡು ಬಂದೆನು.
18 ಅದು ಅವನನ್ನು ತೆಗೆದುಕೊಂಡು ಹೋದಲ್ಲೆಲ್ಲಾ ಅವನನ್ನು ಒದ್ದಾಡಿಸುತ್ತದೆ; ಮತ್ತು ಅವನು ನೊರೆ ಸುರಿಸುತ್ತಾ ತನ್ನ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ; ಅದನ್ನು (ದೆವ್ವವನ್ನು) ಬಿಡಿಸಬೇಕೆಂದು ನಾನು ನಿನ ಶಿಷ್ಯರಿಗೆ ಹೇಳಿದೆನು; ಆದರೆ ಅವರಿಂದ ಆಗಲಿಲ್ಲ ಎಂದು ಹೇಳಿದನು.
19 ಅದಕ್ಕಾತನು–ಓ ನಂಬಿಕೆ ಯಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂ ದಿಗೆ ಇರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
20 ಆಗ ಅವರು ಅವನನ್ನು ಆತನ ಬಳಿಗೆ ತಂದರು; ಅವನು ಆತನನ್ನು ನೋಡಿದ ತಕ್ಷಣವೇ ಆ ಆತ್ಮವು ಅವನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು.
21 ಆತನು ಅವನ ತಂದೆಗೆ–ಇದು ಅವನನ್ನು ಹಿಡಿದು ಎಷ್ಟು ಕಾಲವಾಯಿತು ಎಂದು ಕೇಳಲು ಅವನು– ಬಾಲ್ಯದಿಂದಲೇ;
22 ಅದು ಅವನನ್ನು ನಾಶಪಡಿಸಲು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು; ಆದರೆ ನೀನು ಏನಾದರೂ ಮಾಡಲು ಸಾಧ್ಯ ವಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯ ಮಾಡು ಅಂದನು.
23 ಆಗ ಯೇಸು ಅವನಿಗೆ–ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
24 ತಕ್ಷಣವೇ ಮಗುವಿನ ತಂದೆಯು–ಕರ್ತನೇ, ನಾನು ನಂಬು ತ್ತೇನೆ; ನನಗೆ ಅಪನಂಬಿಕೆ ಇಲ್ಲದಂತೆ ನೀನು ಸಹಾಯ ಮಾಡು ಎಂದು ಕಣ್ಣೀರಿನಿಂದ ಕೂಗಿ ಹೇಳಿದನು.
25 ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ –ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು.
26 ಆಗ ಅದು ಕೂಗಿ ಅವನನ್ನು ಬಹಳವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂತು; ಮತ್ತು ಅವನು ಸತ್ತವನ ಹಾಗೆ ಬಿದ್ದದರಿಂದ ಅನೇಕರು–ಅವನು ಸತ್ತಿದ್ದಾನೆ ಅಂದರು.
27 ಆದರೆ ಯೇಸು ಕೈ ಹಿಡಿದು ಅವನನ್ನು ಮೇಲಕ್ಕೆತ್ತಲು ಅವನು ಎದ್ದನು.
28 ಆತನು ಮನೆಯೊಳಕ್ಕೆ ಬಂದಾಗ ಆತನ ಶಿಷ್ಯರು ಆತನಿಗೆ ಪ್ರತ್ಯೇಕವಾಗಿ–ಆ ಅಶುದ್ಧಾತ್ಮವನ್ನು ಹೊರಗೆ ಹಾಕುವದಕ್ಕೆ ನಮ್ಮಿಂದ ಯಾಕೆ ಆಗಲಿಲ್ಲ ಎಂದು ಕೇಳಿದರು.
29 ಆತನು ಅವರಿಗೆ–ಈ ತರವಾ ದದ್ದು ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವದರಿಂದಲೂ ಹೊರಗೆ ಬರಲಾರದು ಅಂದನು.
ಮಾರ್ಕನು 3
11 ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು–ನೀನು ದೇವಕುಮಾರನು ಎಂದು ಕೂಗಿ ಹೇಳಿದವು.
12 ಆದರೆ ಆತನು ತನ್ನನ್ನು ಯಾರಿಗೂ ತಿಳಿಯಪಡಿಸಬಾರದೆಂದು ಅವರಿಗೆ ನೇರವಾಗಿ ಆಜ್ಞಾಪಿಸಿದನು.
ಮತ್ತಾಯನು 12: ಯೇಸು ಮತ್ತು ಬೆಲ್ಜೆಬೂಲನು
22 ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.
23 ಆಗ ಜನರೆಲ್ಲರು ವಿಸ್ಮಯ ಗೊಂಡವರಾಗಿ–ಈತನು ದಾವೀದನ ಕುಮಾರ ನಲ್ಲವೇ ಅಂದರು.
24 ಆದರೆ ಫರಿಸಾಯರು ಇದನ್ನು ಕೇಳಿದಾಗ–ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.
25 ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ–ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.
26 ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಹಾಕಿದರೆ ಅವನು ತನಗೆ ವಿರೋಧವಾಗಿ ತಾನೇ ವಿಭಾಗಿಸಲ್ಪಟ್ಟಿದ್ದಾನೆ; ಹಾಗಾದರೆ ಅವನ ರಾಜ್ಯವು ಹೇಗೆ ನಿಂತೀತು?
27 ಮತ್ತು ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಬಿಡಿಸಿದರೆ ನಿಮ್ಮ ಮಕ್ಕಳು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವರು.
28 ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.
29 ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು.
30 ನನ್ನ ಸಂಗಡ ಇರದ ವನು ನನಗೆ ವಿರೋಧವಾಗಿದ್ದಾನೆ; ಮತ್ತು ನನ್ನ ಸಂಗಡ ಕೂಡಿಸದವನು ಚದರಿಸುವವನಾಗಿದ್ದಾನೆ ಎಂದು ಹೇಳಿದನು.
31 ಆದಕಾರಣ ನಾನು ನಿಮಗೆ ಹೇಳುವದೇ ನಂದರೆ– ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.
32 ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಈ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ.
33 ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು.
34 ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.
35 ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.
36 ಆದರೆ ನಾನು ನಿಮಗೆ ಹೇಳುವದೇನಂದರೆ– ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
37 ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.
ಮತ್ತಾಯನು 8
28 ಆತನು ಆಚೆಯ ದಡದ ಗದರೇನರ ದೇಶಕ್ಕೆ ಬಂದಾಗ ದೆವ್ವಗಳು ಹಿಡಿದಿದ್ದ ಇಬ್ಬರು ಸಮಾಧಿ ಗಳೊಳಗಿಂದ ಆತನ ಎದುರಿಗೆ ಬಂದರು. ಅವರು ಬಹು ಉಗ್ರತೆಯುಳ್ಳವರಾಗಿದ್ದದರಿಂದ ಯಾವ ಮನು ಷ್ಯನೂ ಆ ಮಾರ್ಗವಾಗಿ ಹೋಗುವ ಹಾಗಿದ್ದಿಲ್ಲ.
29 ಆಗ ಇಗೋ, ಅವರು–ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
30 ಆಗ ಅವರಿಗೆ ಬಹು ದೂರದಲ್ಲಿ ಬಹಳ ಹಂದಿಗಳ ಗುಂಪು ಮೇಯುತ್ತಿತ್ತು.
31 ಆದದರಿಂದ ದೆವ್ವಗಳು ಆತನಿಗೆ–ನೀನು ನಮ್ಮನ್ನು ಹೊರಗೆ ಹಾಕುವದಾದರೆ ಆ ಹಂದಿಗಳ ಗುಂಪಿನೊಳಗೆ ಸೇರಿಕೊಳ್ಳುವದಕ್ಕೆ ನಮಗೆ ಅಪ್ಪಣೆ ಕೊಡು ಎಂದು ಬೇಡಿಕೊಂಡವು.
32 ಆತನು ಅವುಗಳಿಗೆ–ಹೋಗಿರಿ ಅಂದನು. ಆಗ ಅವು ಹೊರಗೆ ಬಂದು ಹಂದಿಗಳ ಗುಂಪಿನೊಳಗೆ ಸೇರಿಕೊಂಡವು; ಆಗ ಇಗೋ, ಹಂದಿಗಳ ಗುಂಪೆಲ್ಲಾ ಸಮುದ್ರದ ಕಡಿದಾದ ಸ್ಥಳಕ್ಕೆ ಉಗ್ರವಾಗಿ ಓಡಿಹೋಗಿ ನೀರಿನಲ್ಲಿ ಬಿದ್ದು ಸತ್ತು ಹೋದವು.
33 ಮತ್ತು ಅವುಗಳನ್ನು ಕಾಯುತ್ತಿದ್ದವರು ಪಟ್ಟಣ ದೊಳಕ್ಕೆ ಓಡಿಹೋಗಿ ಎಲ್ಲವನ್ನೂ ದೆವ್ವಗಳು ಹಿಡಿದಿದ್ದವರಿಗೆ ಸಂಭವಿಸಿದ್ದನ್ನೂ ತಿಳಿಯಪಡಿಸಿದರು.
34 ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
ಅಪೊಸ್ತಲರ ಕೃತ್ಯಗಳು 19
8 ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
9 ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
10 ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.
11 ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ
12 ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.
13 ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ–ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು.
14 ಯಾಜಕರಲ್ಲಿ ಮುಖ್ಯನಾದ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಕುಮಾರರು ಹಾಗೆ ಮಾಡಿದರು.
15 ಆದರೆ ದುರಾತ್ಮವು ಪ್ರತ್ಯುತ್ತರವಾಗಿ–ನಾನು ಯೇಸುವನ್ನು ಬಲ್ಲೆನು, ಪೌಲನನ್ನೂ ಬಲ್ಲೆನು; ನೀವಾದರೆ ಯಾರು ಎಂದು ಕೇಳಿತು.
16 ದುರಾತ್ಮಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿಬಿದ್ದು ಅವರನ್ನು ಸೋಲಿಸಿ ಬಲಾತ್ಕರಿ ಸಿದ್ದರಿಂದ ಅವರು ಬೆತ್ತಲೆಯಾಗಿ ಗಾಯಗೊಂಡು ಆ ಮನೆಯೊಳಗಿಂದ ಓಡಿ ಹೋದರು.
17 ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು. ಕರ್ತನಾದ ಯೇಸು ವಿನ ಹೆಸರು ಘನಹೊಂದಿತು.
18 ನಂಬಿದ ಅನೇಕರು ಬಂದು ಒಪ್ಪಿಕೊಂಡು ತಮ್ಮ ಕ್ರಿಯೆಗಳನ್ನು ತೋರಿಸಿ ದರು.
19 ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದ ವರಲ್ಲಿ ಅನೇಕರು ಸಹ ಬಂದು ತಮ್ಮ ಪುಸ್ತಕಗಳನ್ನು ತಂದು ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವು ಗಳ ಕ್ರಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಎಂದು ತಿಳಿದು ಕೊಂಡರು.
20 ಈ ರೀತಿಯಾಗಿ ದೇವರ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲ ವಾಯಿತು.
ಲೂಕನು 10
1 ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು.
2 ಆತನು ಅವರಿಗೆ–ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.
3 ಹೋಗಿರಿ, ಇಗೋ, ತೋಳಗಳ ಮಧ್ಯದಲ್ಲಿ ಕುರಿಮರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.
4 ಹವ್ಮೆಾಣಿಯನ್ನಾಗಲೀ ಚೀಲವನ್ನಾಗಲೀ ಕೆರಗಳನ್ನಾಗಲೀ ತಕ್ಕೊಳ್ಳಬೇಡಿರಿ; ಮತ್ತು ದಾರಿಯಲ್ಲಿ ಯಾರನ್ನೂ ವಂದಿಸಬೇಡಿರಿ.
5 ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು–ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ.
6 ಅಲ್ಲಿ ಸಮಾಧಾನದ ಮಗನು ಇದ್ದರೆ ನಿಮ್ಮ ಸಮಾಧಾನವು ಅವರ ಮೇಲೆ ಇರುವದು; ಇಲ್ಲದಿದ್ದರೆ ಅದು ನಿಮಗೆ ಹಿಂದಿರು ಗುವದು.
7 ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ;
8 ಯಾವದಾದರೂ ಪಟ್ಟಣದೊಳಗೆ ನೀವು ಪ್ರವೇಶಿಸುವಾಗ ಅವರು ನಿಮ್ಮನ್ನು ಸೇರಿಸಿಕೊಂಡರೆ ನಿಮ್ಮ ಮುಂದೆ ಇಡುವಂಥವುಗಳನ್ನು ತಿನ್ನಿರಿ.
9 ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ–ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ.
10 ಆದರೆ ನೀವು ಪ್ರವೇಶಿ ಸುವ ಯಾವ ಪಟ್ಟಣದಲ್ಲಿಯಾದರೂ ಅವರು ನಿಮ್ಮನ್ನು ಸೇರಿಸಿಕೊಳ್ಳದಿದ್ದರೆ ನೀವು ಹೊರಟು ಅದೇ ಬೀದಿ ಗಳಲ್ಲಿ ಹೋಗಿ–
11 ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
12 ಆದರೆ ಆ ದಿನದಲ್ಲಿ ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿಯು ಹೆಚ್ಚಾಗಿ ತಾಳಬಹುದಾಗಿರುವದು ಎಂದು ನಾನು ನಿಮಗೆ ಹೇಳುತ್ತೇನೆ.
13 ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಸೀದೋನ್ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.
14 ಆದರೆ ನ್ಯಾಯ ತೀರ್ಪಿನಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ಗಳ ಗತಿಯು ಹೆಚ್ಚಾಗಿ ತಾಳಬಹು ದಾಗಿರುವದು.
15 ಆಕಾಶದವರೆಗೂ ಎತ್ತಲ್ಪಟ್ಟಿರುವ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬ ಲ್ಪಡುವಿ.
16 ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
17 ತರುವಾಯ ಆ ಎಪ್ಪತ್ತು ಮಂದಿ ಸಂತೋಷದಿಂದ ಹಿಂತಿರುಗಿ–ಕರ್ತನೇ, ನಿನ್ನ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು ಅಂದರು.
18 ಆಗ ಆತನು ಅವರಿಗೆ–ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವದನ್ನು ನಾನು ನೋಡಿದೆನು.
19 ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.
20 ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.
21 ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು — ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ
22 ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.
23 ಆತನು ತನ್ನ ಶಿಷ್ಯರ ಕಡೆಗೆ ತಿರುಗಿಕೊಂಡು–ನೀವು ನೋಡು ತ್ತಿರುವವುಗಳನ್ನು ನೋಡುವ ಕಣ್ಣುಗಳು ಧನ್ಯವಾದವು ಗಳು ಎಂದು ಪ್ರತ್ಯೇಕವಾಗಿ ಹೇಳಿದನು.
24 ಯಾಕಂದರೆ ಅನೇಕ ಪ್ರವಾದಿಗಳೂ ಅರಸರೂ ನೀವು ನೋಡು ವಂಥವುಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳ ಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಯೇಸು ಇಬ್ಬರು ದೆವ್ವ-ಪೀಡಿತ ಪುರುಷರನ್ನು ವಾಸಿಮಾಡುತ್ತಾನೆ
ಮತ್ತಾಯನು 8
28 ಆತನು ಆಚೆಯ ದಡದ ಗದರೇನರ ದೇಶಕ್ಕೆ ಬಂದಾಗ ದೆವ್ವಗಳು ಹಿಡಿದಿದ್ದ ಇಬ್ಬರು ಸಮಾಧಿ ಗಳೊಳಗಿಂದ ಆತನ ಎದುರಿಗೆ ಬಂದರು. ಅವರು ಬಹು ಉಗ್ರತೆಯುಳ್ಳವರಾಗಿದ್ದದರಿಂದ ಯಾವ ಮನು ಷ್ಯನೂ ಆ ಮಾರ್ಗವಾಗಿ ಹೋಗುವ ಹಾಗಿದ್ದಿಲ್ಲ.
29 ಆಗ ಇಗೋ, ಅವರು–ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
30 ಆಗ ಅವರಿಗೆ ಬಹು ದೂರದಲ್ಲಿ ಬಹಳ ಹಂದಿಗಳ ಗುಂಪು ಮೇಯುತ್ತಿತ್ತು.
31 ಆದದರಿಂದ ದೆವ್ವಗಳು ಆತನಿಗೆ–ನೀನು ನಮ್ಮನ್ನು ಹೊರಗೆ ಹಾಕುವದಾದರೆ ಆ ಹಂದಿಗಳ ಗುಂಪಿನೊಳಗೆ ಸೇರಿಕೊಳ್ಳುವದಕ್ಕೆ ನಮಗೆ ಅಪ್ಪಣೆ ಕೊಡು ಎಂದು ಬೇಡಿಕೊಂಡವು.
32 ಆತನು ಅವುಗಳಿಗೆ–ಹೋಗಿರಿ ಅಂದನು. ಆಗ ಅವು ಹೊರಗೆ ಬಂದು ಹಂದಿಗಳ ಗುಂಪಿನೊಳಗೆ ಸೇರಿಕೊಂಡವು; ಆಗ ಇಗೋ, ಹಂದಿಗಳ ಗುಂಪೆಲ್ಲಾ ಸಮುದ್ರದ ಕಡಿದಾದ ಸ್ಥಳಕ್ಕೆ ಉಗ್ರವಾಗಿ ಓಡಿಹೋಗಿ ನೀರಿನಲ್ಲಿ ಬಿದ್ದು ಸತ್ತು ಹೋದವು.
33 ಮತ್ತು ಅವುಗಳನ್ನು ಕಾಯುತ್ತಿದ್ದವರು ಪಟ್ಟಣ ದೊಳಕ್ಕೆ ಓಡಿಹೋಗಿ ಎಲ್ಲವನ್ನೂ ದೆವ್ವಗಳು ಹಿಡಿದಿದ್ದವರಿಗೆ ಸಂಭವಿಸಿದ್ದನ್ನೂ ತಿಳಿಯಪಡಿಸಿದರು.
34 ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
ಯೇಸು ಒಬ್ಬ ದೆವ್ವ-ಪೀಡಿತ ಹುಡುಗನನ್ನು ವಾಸಿಮಾಡುತ್ತಾನೆ
ಲೂಕನು 9
37 ಇದಾದ ಮೇಲೆ ಮರುದಿವಸ ಅವರು ಬೆಟ್ಟ ದಿಂದ ಕೆಳಗಿಳಿದು ಬಂದಾಗ ಬಹಳ ಜನರು ಆತನನ್ನು ಸಂಧಿಸಿದರು.
38 ಆಗ ಇಗೋ, ಆ ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ–ಬೋಧಕನೇ, ನನ್ನ ಮಗನ ಮೇಲೆ ದೃಷ್ಟಿಯಿಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ಯಾಕಂದರೆ ಅವನು ನನಗೆ ಒಬ್ಬನೇ ಮಗನು.
39 ಇಗೋ, ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಅದು ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವದಲ್ಲದೆ ಜಜ್ಜುವದು. ಅದು ಅವನನ್ನು ಬಿಟ್ಟುಹೋಗುವದು ಕಷ್ಟ.
40 ಅದನ್ನು ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಬೇಡಿಕೊಂಡೆನು; ಆದರೆ ಅದು ಅವರಿಂದ ಆಗಲಿಲ್ಲ ಅಂದನು.
41 ಯೇಸು ಪ್ರತ್ಯುತ್ತರ ವಾಗಿ–ಓ ನಂಬಿಕೆಯಿಲ್ಲದ ವಕ್ರಸಂತತಿಯೇ, ನಾನು ಎಷ್ಟು ಕಾಲ ನಿಮ್ಮೊಂದಿಗಿರಲಿ ಮತ್ತು ನಿಮ್ಮನ್ನು ಸಹಿಸಲಿ ಎಂದು ಹೇಳಿ–ನಿನ್ನ ಮಗನನ್ನು ಇಲ್ಲಿಗೆ ಕರಕೊಂಡು ಬಾ ಅಂದನು.
42 ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು.
ಮಾರ್ಕನು 9
38 ಯೋಹಾನನು ಆತನಿಗೆ — ಬೋಧಕನೇ, ನಮ್ಮನ್ನು ಹಿಂಬಾಲಿಸದವನೊಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನು ನಮ್ಮನ್ನು ಹಿಂಬಾಲಿಸುವವನಲ್ಲವಾದ್ದರಿಂದ ನಾವು ಅವನಿಗೆ ಅಡ್ಡಿಮಾಡಿದೆವು ಎಂದು ಹೇಳಿದನು.
39 ಆದರೆ ಯೇಸು–ಅವನಿಗೆ ಅಡ್ಡಿಮಾಡಬೇಡಿರಿ; ಯಾಕಂದರೆ ನನ್ನ ಹೆಸರಿನಲ್ಲಿ ಅದ್ಭುತಕಾರ್ಯವನ್ನು ಮಾಡಿ ನನ್ನ ವಿಷಯದಲ್ಲಿ ಹಗುರಾಗಿ ಕೆಟ್ಟದ್ದನ್ನು ಮಾತನಾಡುವ ಒಬ್ಬನಾದರೂ ಇಲ್ಲ.
40 ಯಾಕಂದರೆ ನಮಗೆ ವಿರೋಧಿಯಾಗಿರದವನು ನಮ್ಮ ಪಕ್ಷದವ ನಾಗಿದ್ದಾನೆ.
41 ಇದಲ್ಲದೆ ನೀವು ಕ್ರಿಸ್ತನಿಗೆ ಸೇರಿದವ ರಾದದರಿಂದ ಯಾವನಾದರೂ ನನ್ನ ಹೆಸರಿನಲ್ಲಿ ನಿಮಗೆ ಒಂದು ತಂಬಿಗೆ ನೀರನ್ನು ಕೊಟ್ಟರೆ ಅವನು ತನ್ನ ಪ್ರತಿ ಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಮಾರ್ಕನು 6
6 ಆತನು ಅವರ ಅಪನಂಬಿಕೆ ಯ ದೆಸೆಯಿಂದ ಆಶ್ಚರ್ಯಪಟ್ಟನು; ಮತ್ತು ಸುತ್ತಲಿನ ಹಳ್ಳಿಗಳಿಗೆ ಹೋಗಿ ಬೋಧಿಸುತ್ತಾ ಇದ್ದನು.
7 ಆತನು ಹನ್ನೆರಡು ಮಂದಿಯನ್ನು ತನ್ನ ಬಳಿಗೆ ಕರೆದು ಅವರಿಗೆ ಅಶುದ್ಧಾತ್ಮಗಳ ಮೇಲೆ ಅಧಿಕಾರ ಕೊಟ್ಟು ಇಬ್ಬಿಬ್ಬರನ್ನು ಕಳುಹಿಸಲಾರಂಭಿಸಿದನು.
8 ಅವರು ತಮ್ಮ ಪ್ರಯಾಣಕ್ಕಾಗಿ ಒಂದು ಕೋಲಿನ ಹೊರತು ಚೀಲವನ್ನಾಗಲೀ ರೊಟ್ಟಿಯನ್ನಾಗಲೀ ಹವ್ಮೆಾಣಿಯಲ್ಲಿ ಹಣವನ್ನಾಗಲೀ ತಕ್ಕೊಳ್ಳಬಾರ ದೆಂತಲೂ
9 ಕೆರಗಳನ್ನು ಮೆಟ್ಟಿಕೊಂಡಿರಬೇಕೆಂದೂ ಎರಡು ಅಂಗಿಗಳನ್ನು ಹಾಕಿಕೊಳ್ಳಬಾರದೆಂದೂ ಆಜ್ಞಾ ಪಿಸಿದನು.
10 ಇದಲ್ಲದೆ ಆತನು ಅವರಿಗೆ–ಯಾವ ಸ್ಥಳದಲ್ಲಿಯಾದರೂ ಒಂದು ಮನೆಯೊಳಕ್ಕೆ ನೀವು ಪ್ರವೇಶಿಸಿದರೆ ಆ ಸ್ಥಳದಿಂದ ನೀವು ಹೊರಡುವ ತನಕ ಅಲ್ಲೇ ಇಳುಕೊಳ್ಳಿರಿ.
11 ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ–ನ್ಯಾಯತೀರ್ಪಿನ ದಿನದಲ್ಲಿ ಆ ಪಟ
12 ಅವರು ಹೊರಟು ಹೋಗಿ ಜನರು ಮಾನಸಾಂತರಪಡಬೇಕೆಂದು ಸಾರಿದರು.
13 ಅವರು ಅನೇಕ ದೆವ್ವಗಳನ್ನು ಬಿಡಿಸಿ ಬಹಳ ರೋಗಿಗಳಿಗೆ ಎಣ್ಣೆ ಹಚ್ಚಿ ಅವರನ್ನು ಸ್ವಸ್ಥಪಡಿಸಿದರು.
ಯೇಸು ಅಧಿಕಾರದಿಂದ ಮಾತಾಡಿದನು
ಮಾರ್ಕನು 1
21 ಆಗ ಅವರು ಕಪೆರ್ನೌಮಿಗೆ ಹೋದರು; ಕೂಡಲೆ ಆತನು ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಗೆ ಪ್ರವೇಶಿಸಿ ಬೋಧಿಸಿದನು.
22 ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಅಲ್ಲ, ಅಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
23 ಆಗ ಅವರ ಸಭಾಮಂದಿ ರದಲ್ಲಿ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನಿದ್ದನು.
24 ಅವನು–ನಮ್ಮನ್ನು ಬಿಟ್ಟುಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನೇ ಎಂದು ಕೂಗಿ ಹೇಳಿದನು.
25 ಆಗ ಯೇಸು ಅವನನ್ನು ಗದರಿಸಿ–ಸುಮ್ಮನಿರು, ಅವನೊಳ ಗಿಂದ ಹೊರಗೆ ಬಾ ಅಂದನು.
26 ಆಗ ಅಶುದ್ಧಾತ್ಮವು ಅವನನ್ನು ಒದ್ದಾಡಿಸಿದ ಮೇಲೆ ಮಹಾಶಬ್ದದಿಂದ ಕೂಗಿ ಅವನೊಳಗಿಂದ ಹೊರಗೆ ಬಂದಿತು.
27 ಅದಕ್ಕೆ ಅವರೆಲ್ಲರೂ–ಇದು ಏನಾಗಿರಬಹುದು? ಈ ಹೊಸ ಬೋಧನೆ ಯಾವದು? ಯಾಕಂದರೆ ಆತನು ಅಶುದ್ಧಾತ್ಮಗಳಿಗೂ ಅಧಿಕಾರದಿಂದ ಅಪ್ಪಣೆಕೊಡುತ್ತಾನೆ; ಅವು ಆತನಿಗೆ ವಿಧೇಯವಾಗುತ್ತವಲ್ಲಾ ಎಂದು ತಮ್ಮಲ್ಲಿ ತಾವೇ ಪ್ರಶ್ನಿಸಿಕೊಳ್ಳುವಷ್ಟು ವಿಸ್ಮಯಗೊಂಡರು.
28 ಕೂಡಲೆ ಆತನ ಕೀರ್ತಿಯು ಗಲಿಲಾಯದ ಸುತ್ತಮುತ್ತಲಿನ ಎಲ್ಲಾ ಪ್ರದೇಶದಲ್ಲಿ ಹಬ್ಬಿತು.
ಭವಿಷ್ಯವನ್ನು ಊಹಿಸುವ ಆತ್ಮ
ಅಪೊಸ್ತಲರ ಕೃತ್ಯಗಳು 16
16 ಇದಾದ ಮೇಲೆ ನಾವು ಪ್ರಾರ್ಥನೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಕಾಲಜ್ಞಾನದ ದುರಾತ್ಮ ಹಿಡಿದವಳಾಗಿ ಕಣಿ ಹೇಳುವದರಿಂದ ತನ್ನ ಯಜ ಮಾನರಿಗೆ ಬಹು ಆದಾಯವನ್ನು ತರುತ್ತಿದ್ದ ಒಬ್ಬ ಹುಡುಗಿಯು ನಮ್ಮನ್ನು ಸಂಧಿಸಿದಳು.
17 ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ–ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
18 ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ–ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.
19 ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು.
20 ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ–ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ.
21 ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು.
ಮೋಶೆಯ ದೇಹವನ್ನು ಕೇಳಿಕೊಳ್ಳುವ ಸೈತಾನನು
ಯೂದನು 1
5 ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ–ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.
6 ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
7 ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.
8 ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ.
9 ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ–ಕರ್ತನು ನಿನ್ನನ್ನು ಗದರಿಸಲಿ ಅಂದನು.
10 ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
ಮೋಸಗೊಳಿಸುವ ಆತ್ಮಗಳು
1 ತಿಮೊಥೆಯನಿಗೆ 4
1 ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
2 ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು
3 ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
4 ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.
5 ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಅದು ಪವಿತ್ರವಾಗುತ್ತದಲ್ಲಾ.
6 ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವರಾಗಿ ಯೇಸು ಕ್ರಿಸ್ತನ ಒಳ್ಳೇ ಸೇವಕನಾಗಿರುವಿ.
7 ಆದರೆ ಅಜ್ಜೀಕಥೆಗಳಂತಿರುವ ಅಶುದ್ಧವಾದ ಆ ಕಥೆಗಳನ್ನು ನಿರಾಕರಿಸಿ ನೀನು ದೇವ ಭಕ್ತಿಯ ವಿಷಯದಲ್ಲಿಯೇ ಸಾಧನೆ ಮಾಡಿಕೋ.
8 ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
9 ಈ ಮಾತು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ.
10 ಆದದರಿಂದ ಇದಕ್ಕಾಗಿ ನಾವು ಕಷ್ಟಪಡುವವರೂ ನಿಂದೆಯನ್ನನುಭವಿಸುವವರೂ ಆಗಿದ್ದೇವೆ; ಯಾಕಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕನಾಗಿರುವ ಜೀವವುಳ್ಳ ದೇವರನ್ನು ನಾವು ನಂಬಿ ದ್ದೇವೆ.
ದೆವ್ವಗಳಿಗೆ ಬಲಿಗಳು- ವಿಗ್ರಹಗಳು
ಯಾಜಕಕಾಂಡ 17
1 ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ–
2 ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಮಕ್ಕಳಿಗೂ ಮಾತನಾಡಿ ಅವರಿಗೆ ಹೀಗೆ ಹೇಳು–ಕರ್ತನು ನಿಮಗೆ ಆಜ್ಞಾಪಿಸಿ ಹೇಳುವದೇನಂದರೆ,
3 ಇಸ್ರಾಯೇಲಿನ ಮನೆತನದಲ್ಲಿ ಯಾವನಾದರೂ ಒಂದು ಎತ್ತನ್ನಾಗಲಿ ಕುರಿಮರಿಯ ನ್ನಾಗಲಿ ಆಡನ್ನಾಗಲಿ ಪಾಳೆಯದೊಳಗಾಗಲಿ ಹೊರ ಗಾಗಲಿ ವಧಿಸಿ
4 ಕರ್ತನಿಗೆ ಸಮರ್ಪಿಸುವ ಬಲಿಯಾಗಿ ಕರ್ತನ ಸನ್ನಿಧಿಯಲ್ಲಿರುವ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನ ಮೇಲೆ ರಕ್ತಾ ಪರಾಧವು ಹೊರಿಸಲ್ಪಡಬೇಕು; ಅವನು ರಕ್ತ ಸುರಿಸಿ ರುವನು; ಆ ಮನುಷ್ಯನು ತನ್ನ ಜನರ ಮಧ್ಯದೊ ಳಗಿಂದ ತೆಗೆದುಹಾಕಲ್ಪಡಬೇಕು.
5 ಇಸ್ರಾಯೇಲ್ ಮಕ್ಕಳು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಕರ್ತನಿಗೆ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಕರ್ತನಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು.
6 ಯಾಜಕನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಯಜ್ಞವೇದಿಯ ಮೇಲೆ ರಕ್ತವನ್ನು ಚಿಮುಕಿಸಬೇಕು. ಕೊಬ್ಬನ್ನು ಕರ್ತನಿಗೆ ಸುಗಂಧವಾಸನೆಯಾಗಿ ಸುಡಬೇಕು.
7 ಅವರು ಜಾರತ್ವ ಮಾಡುವಂತೆ ಯಾರ ಹಿಂದೆ ಹೋದರೋ ಆ ದೆವ್ವ ಗಳಿಗೆ ಇನ್ನೆಂದಿಗೂ ಅವರು ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೆ ಅವರ ತಲ ತಲಾಂತರಗಳ ವರೆಗೆ ಶಾಶ್ವತವಾದ ನಿಯಮವಾಗಿ ರುವದು.
8 ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ–ಇಸ್ರಾಯೇಲಿನ ಮನೆತನದವರಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯರಾಗಿದ್ದ ಪರಕೀಯರು ದಹನಬಲಿಯನ್ನಾಗಲಿ ಯಜ್ಞಸಮ ರ್ಪಣೆಯನ್ನಾಗಲಿ ಅರ್ಪಿಸಿದರೆ
9 ಅದನ್ನು ಕರ್ತನಿಗೆ ಸಮರ್ಪಿಸುವಂತೆ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನು ತನ್ನ ಜನಗಳ ಮಧ್ಯ ದೊಳಗಿಂದ ತೆಗೆದುಹಾಕಲ್ಪಡಬೇಕು.
10 ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
11 ಯಾಕಂದರೆ ಪ್ರತಿ ದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮ ಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರ ವಾಗಿರುವ ಕಾರಣ ಅದರಿಂದ ದೋಷಪರಿಹಾರ ವಾಗುತ್ತದಷ್ಟೆ.
12 ಆದಕಾರಣ ನಿಮ್ಮಲ್ಲಿ ಯಾವನಾ ದರೂ ರಕ್ತವನ್ನು ತಿನ್ನಬಾರದೆಂದು ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನು ರಕ್ತವನ್ನು ತಿನ್ನಬಾರ ದೆಂದು ನಾನು ಇಸ್ರಾಯೇಲ್ ಮಕ್ಕಳಿಗೆ ಹೇಳಿದೆನು.
ದೆವ್ವಗಳಿಗೆ ಮತ್ತು ಅನುಯಾಯಿಗಳಿಗೆ ತೀರ್ಪು
2 ಪೇತ್ರನು 2
4 ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
5 ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.
6 ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
7 ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು.
8 ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.
9 ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
ಒಬ್ಬ ಸ್ತ್ರೀ ಮತ್ತು ಘಟ ಸರ್ಪ
ಪ್ರಕಟನೆ 12
1 ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು; ಅಲ್ಲಿ ಸೂರ್ಯನನ್ನು ಧರಿಸಿ ಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.
2 ಆಕೆಯು ಗರ್ಭಿಣಿಯಾಗಿದ್ದು ಪ್ರಸವವೇದನೆಯಿಂದ ಹೆರುವದಕ್ಕೆ ಸಂಕಟಪಡುತ್ತಾ ಕೂಗುತ್ತಿದ್ದಳು.
3 ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು.
4 ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು. ಹೆರುವದಕ್ಕೆ ಸಿದ್ಧವಾಗಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.
5 ಆಕೆ ಜನಾಂಗಗಳನ್ನೆಲ್ಲಾ ಕಬ್ಬಿಣದ ಕೋಲಿನಿಂದ ಆಳ ಬೇಕಾಗಿದ್ದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.
6 ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು; ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು.
7 ಇದಲ್ಲದೆ ಪರಲೋಕದಲ್ಲಿ ಯುದ್ಧ ನಡೆಯಿತು. ವಿಾಕಾಯೇಲನೂ ಅವನ ದೂತರೂ ಘಟಸರ್ಪಕ್ಕೆ ವಿರೋಧವಾಗಿ ಯುದ್ಧಮಾಡಿದರು; ಘಟಸರ್ಪನೂ ಅವನ ದೂತರೂ ಯುದ್ದಮಾಡಿ ಸೋತು ಹೋದರು.
8 ಆಗ ಪರಲೋಕದಲ್ಲಿ ಅವರಿಗೆ ಸ್ಥಾನವು ಇನ್ನೆಂದಿಗೂ ಇಲ್ಲದೆ ಹೋಯಿತು.
9 ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
10 ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು–ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ.
11 ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
12 ಆದದರಿಂದ ಪರಲೋಕಗಳೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಭೂಮಿಯ ಮೇಲೆ ಮತ್ತು ಸಮುದ್ರದಲ್ಲಿ ಇರುವವರಿಗೆ ಅಯ್ಯೊ! ಯಾಕಂದರೆ ಸೈತಾನನು ತನಗಿರುವ ಕಾಲವು ಸ್ವಲ್ಪವೆಂದು ತಿಳಿದು ಮಹಾರೌದ್ರವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ ಎಂಬದಾಗಿ ಹೇಳಿತು
ಕುರಿ ಮತ್ತು ಆಡುಗಳು
ಮತ್ತಾಯನು 25
31 ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
32 ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು;
33 ಆತನು ಕುರಿಗಳನ್ನು ತನ್ನ ಬಲಗಡೆ ಯಲ್ಲಿಯೂ ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು.
34 ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ–ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
35 ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;
36 ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು.
37 ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ–ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ
38 ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು?
39 ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು.
40 ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ–ನಾನು ನಿಮಗೆ ನಿಜವಾಗಿ ಹೇಳುತ್ತೇನೆ–ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
41 ಆತನು ಎಡಗಡೆ ಯಲ್ಲಿರುವವರಿಗೆ–ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
42 ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ.
43 ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು.
44 ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ–ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು.
45 ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ–ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.
46 ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
ಯಾಜಕಕಾಂಡ 20
27 ಮನುಷ್ಯನಾಗಲಿ ಸ್ತ್ರೀಯಾಗಲಿ ಮಂತ್ರವಾದಿ ಇಲ್ಲವೆ ಮಾಟಗಾರರಾಗಿರುವದಾಗಿದ್ದರೆ ಅವರನ್ನು ನಿಶ್ಚಯವಾಗಿ ಕಲ್ಲೆಸೆದು ಕೊಲ್ಲಬೇಕು; ಅವರ ರಕ್ತವು ಅವರ ಮೇಲೆ ಇರುವದು.
ಪೌಲನು ಮತ್ತು ಅಶುದ್ಧ ಆತ್ಮಗಳ ಬೋಧಕರು
2 ಕೊರಿಂಥದವರಿಗೆ 11
1 ನನ್ನ ಬುದ್ಧಿಹೀನತೆಯನ್ನು ನೀವು ಸ್ವಲ್ಪ ಮಟ್ಟಿಗೆ ಸಹಿಸಿಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ; ನಿಜವಾಗಿಯೂ ನನ್ನನ್ನು ಸಹಿಸಿ ಕೊಳ್ಳಿರಿ;
2 ದೈವಾಸಕ್ತಿಯಿಂದಲೇ ನಾನು ನಿಮ್ಮ ವಿಷಯದಲ್ಲಿ ಆಸಕ್ತನಾಗಿದ್ದೇನೆ; ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ದ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯ ಮಾಡಿದೆನಲ್ಲಾ.
3 ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
4 ಯಾಕಂದರೆ ನಾವು ಸಾರದಿದ್ದ ಬೇರೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವನು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೊಂದು ಆತ್ಮವನ್ನು ಹೊಂದುವಾಗಲೂ ಅಂಗೀಕರಿಸದಿದ್ದ ಬೇರೊಂದು ಸುವಾರ್ತೆಯನ್ನು ಸ್ವೀಕರಿಸುವಾಗಲೂ ನೀವು ಚೆನ್ನಾಗಿ ಸಹಿಸಿಕೊಳ್ಳು ತ್ತಿದ್ದೀರಿ.
5 ಅತಿ ಶ್ರೇಷ್ಠರಾದ ಅಪೊಸ್ತಲರೆನಿಸಿಕೊಳ್ಳು ವವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದ ವನಲ್ಲವೆಂದು ಭಾವಿಸುತ್ತೇನೆ.
6 ನಾನು ಮಾತನಾಡು ವದರಲ್ಲಿ ಒರಟಾಗಿದ್ದರೂ ಜ್ಞಾನದಲ್ಲಿ ಅಲ್ಲ, ಎಲ್ಲವು ಗಳಲ್ಲಿ ನಿಮ್ಮ ಮಧ್ಯದಲ್ಲಿ ನಾವು ನಮ್ಮನ್ನು ತೋರ್ಪಡಿಸಿದ್ದೇವೆ.
7 ನೀವು ಹೆಚ್ಚಿಸಲ್ಪಡಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದ್ದು ಅಪರಾಧವೋ?
8 ನಿಮ್ಮ ಸೇವೆ ಮಾಡುವದಕ್ಕೋಸ್ಕರ ನಾನು ಇತರ ಸಭೆಗಳಿಂದ ಸಂಬಳ ತೆಗೆದುಕೊಂಡು ಅವುಗಳನ್ನು ಸುಲುಕೊಂಡೆನು.
9 ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
10 ಕ್ರಿಸ್ತನ ಸತ್ಯವು ನನ್ನಲ್ಲಿರುವದರಿಂದ ಈ ನನ್ನ ಹೊಗಳಿಕೆಯನ್ನು ಅಕಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಬಾರದು.
11 ಯಾಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ದೇವರೇ ಬಲ್ಲನು.
12 ಆದರೆ ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಎಡೆಯೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು; ಅವರು ಯಾವದರಲ್ಲಿ ಹೊಗಳು ತ್ತಾರೋ ಅದರಲ್ಲಿ ನಮ್ಮಂತೆಯೇ ಕಂಡುಬರಲಿ.
13 ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
14 ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ.
15 ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
ಸೈತಾನನ ಇತಿಹಾಸ
ಯೆಶಾಯ 14
3 ಕರ್ತನು ನಿಮ್ಮ ಸಂಕಟದಿಂದಲೂ ಕಳವಳದಿಂದ ಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಸಾಮತಿಯನ್ನು (ಪದ್ಯವನ್ನು) ನೀವು ಹೀಗೆ ಎತ್ತಿ ಹೇಳಬೇಕು.
4 ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ.
5 ಜನರನ್ನು ಉಗ್ರಕೋಪದಿಂದ ಎಡೆಬಿಡದೆ ಹೊಡೆ ದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ
6 ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಕರ್ತನು ಮುರಿದುಬಿಟ್ಟಿದ್ದಾನೆ. ಯಾವನೂ ಅಡ್ಡಿ ಮಾಡನು.
7 ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿ ಗೊಂಡಿದೆ. ಅವರು ಉತ್ಸಾಹಧ್ವನಿಯನ್ನು ಎತ್ತುತ್ತಾರೆ.
8 ಹೌದು, ತುರಾಯಿ ಮರಗಳೂ ಲೆಬನೋನಿನ ದೇವದಾರು ಮರಗಳೂ ನೀನು ಬಿದ್ದಂದಿನಿಂದ ಕಡಿಯುವವನು ಯಾವನೂ ತಮ್ಮ ಮೇಲೆ ಬರಲಿಲ್ಲವೆಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.
9 ನಿನಗೋ ಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವ ರನ್ನೂ ಅಂದರೆ, ಭೂಲೋಕದ ಮುಖಂಡರಾಗಿದ್ದವರೆ ಲ್ಲರನ್ನೂ ಕಲಕಿ (ಎಚ್ಚರಿಸಿ) ಜನಾಂಗಗಳ ಎಲ್ಲಾ ರಾಜ ರುಗಳನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ.
10 ಅವರೆಲ್ಲರು ನಿನಗೆ–ನಮ್ಮ ಹಾಗೆ ನೀನು ಸಹ ಬಲಹೀನನಾಗಿದ್ದೀ, ನೀನು ನಮ್ಮ ಸಮಾನನಾಗಿದ್ದೀ ಎಂದು ಮಾತಾಡಿ ಹೇಳುವರು.
11 ನಿನ್ನ ವೈಭವವೂ ವೀಣೆಗಳ ಸ್ವರವೂ ಸಮಾಧಿಗೆ ಇಳಿಸಲ್ಪಟ್ಟಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ;
12 ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ?
13 ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು.
14 ಉನ್ನತವಾದ ಮೇಘ ಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುತ್ತೇನೆ ಅಂದು ಕೊಂಡಿದ್ದೆಯಲ್ಲಾ;
15 ಆದಾಗ್ಯೂ ಪಾತಾಳದ ಕುಣಿಯ ಪಾರ್ಶ್ವಗಳಿಗೆ ಇಳಿಸಲ್ಪಡುವಿ.
16 ನಿನ್ನನ್ನು ನೋಡುವ ವರು ನಿನ್ನನ್ನು ಸೂಕ್ಷ್ಮವಾಗಿ ದೃಷ್ಟಿಸಿ ಯೋಚಿಸುತ್ತಾ –ಭೂಮಿಯನ್ನು ನಡುಗಿಸಿ ರಾಜ್ಯಗಳನ್ನು ಕದಲಿಸಿ ಪಟ್ಟಣವನ್ನು ನಾಶಮಾಡಿ
17 ಲೋಕವನ್ನು ಕಾಡ ನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದ ವನು ಈ ಮನುಷ್ಯನೋ ಎಂದು ಅಂದುಕೊಳ್ಳುವರು.
ಸಾವಿಗೆ ಕಾರಣವಾಗುವ ಪಾಪ
1 ಯೋಹಾನನು 5
13 ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆಯೂ ನೀವು ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ಹಾಗೆಯೂ ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ಇವು ಗಳನ್ನು ಬರೆದಿದ್ದೇನೆ.
14 ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು.
15 ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ.
16 ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ
17 ಅನೀತಿಯೆಲ್ಲವೂ ಪಾಪವಾಗಿದೆ; ಆದರೂ ಮರಣಕರವಲ್ಲದ ಪಾಪವುಂಟು.
18 ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.
19 ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.
20 ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.
21 ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.